NEWSರಾಜಕೀಯ

ನಾಮಪತ್ರ ಸಲ್ಲಿಸಲು ಸಮಯವನ್ನೇ ನೀಡದ ಚುನಾವಣಾ ಆಯೋಗ: ಚುನಾವಣೆ ಮುಂದೂಡಲು ಎಎಪಿ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪ್ರಕ್ರಿಯೆಗಳ ವೇಳಾಪಟ್ಟಿಯನ್ನು ಏಪ್ರಿಲ್ 8 ರಂದು ಘೋಷಿಸಿ ಏಪ್ರಿಲ್ 15 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ ಎಂದು ತಿಳಿಸಿದೆ.

ಹೀಗಾಗಿ ಇಂದೇ ಕಡೆಯ ದಿನವಾಗಿರುವುದರಿಂದ ಇಂದು ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ. ಸಾಕಷ್ಟು ಸಮಯಾವಕಾಶ ಸಿಗದಿರುವುದರಿಂದ ಚುನಾವಣೆಯನ್ನು ಮುಂದೂಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಇರುವ ಏಳು ದಿನಗಳ ಕಾಲಾವಕಾಶದಲ್ಲಿ ನಾಲ್ಕು ದಿನಗಳು ಸರಕಾರಿ ರಜೆಗಳಾಗಿವೆ. ಇದರ ಪರಿಣಾಮವಾಗಿ, ಆಮ್ ಆದ್ಮಿ ಪಕ್ಷವನ್ನು ಒಳಗೊಂಡಂತೆ ಅನೇಕ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ, ಆದಾಯ ತೆರಿಗೆ ಪ್ರಮಾಣಪತ್ರಗಳು, ಮತದಾರರ ಪಟ್ಟಿ ಸಾರಗಳು, ಅಫಿಡವಿಟ್, ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಸರ್ಕಾರಿ ಕಚೇರಿಗಳು ಮತ್ತು ಬ್ಯಾಂಕ್‌ಗಳಿಂದ ಸಂಗ್ರಹಿಸಲು ಸಾಧ್ಯವಾಗದ ಕಾರಣ ನಾಮಪತ್ರ ಸಲ್ಲಿಸಲು ತೊಡಕಾಗಿದೆ.

ಆದರೆ ಈ ವೇಳಾಪಟ್ಟಿಯನ್ನು ಮುಂಚಿತವಾಗಿ ತಿಳಿದಿರುವ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳು ವೇಳಾಪಟ್ಟಿ ಘೋಷಣೆಗೆ ಮುನ್ನವೇ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಮೂಲಕ ಆಯೋಗ ಬಿಜೆಪಿಯ ಪರ ನಿಂತಿರುವ ಸ್ಪಷ್ಟ ಚಿತ್ರಣ ನಮ್ಮ ಮುಂದಿದೆ. ಆದರೆ ಇತರ ಪಕ್ಷಗಳ ಅಭ್ಯರ್ಥಿಗಳಿಗೆ ಸರಕಾರಿ ರಜೆಗಳ ಕಾರಣದಿಂದ ಮತ್ತು ಅಧಿಕಾರಿಗಳ ರಜೆಗಳ ಕಾರಣದಿಂದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲು ಸಾಧ್ಯವಾಗದೇ ನಾಮಪತ್ರ ಸಲ್ಲಿಸಲು ಕಷ್ಟಸಾಧ್ಯವಾಗಿದೆ.

ರಾಜ್ಯ ಚುನಾವಣಾ ಅಧಿಕಾರಿಗಳು ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ದಿಢೀರನೇ ಘೋಷಿಸಿರುವ ಈ ಚುನಾವಣೆಯನ್ನು ಮುಂದೂಡಿ ಅಭ್ಯರ್ಥಿಗಳಿಗೆ ಸಮರ್ಪಕವಾಗಿ ನಾಮಪತ್ರ ಸಲ್ಲಿಸಲು ಸಮಯಾವಕಾಶ ನೀಡುವಂತೆ ಆಮ್ ಆದ್ಮಿ ಪಕ್ಷ ಚುನಾವಣಾ ಆಯೋಗವನ್ನು ಆಗ್ರಹಿದೆ ಎಂದರು.

ಚುನಾವಣಾ ಆಯೋಗದ ನಡೆದುಕೊಂಡಿರುವ ರೀತಿ ಬಿಜೆಪಿಗೆ ಅನುಕೂಲವನ್ನು ಸೃಷ್ಟಿಸಿದ್ದು ಚುನಾವಣಾ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಗೌರವಾನ್ವಿತ ಸುಪ್ರೀಂ ಕೋರ್ಟ್‌ ಗೋವಾ ಮುನ್ಸಿಪಲ್ ಚುನಾವಣೆಗಳಲ್ಲಿ ನೀಡಿದ ತೀರ್ಪಿಗೆ ವಿರುದ್ಧವಾಗಿದೆ. (ಗೋವಾ ರಾಜ್ಯ v/s ಫೌಜಿಯಾ ಇಮ್ತಿಯಾಜ್ ಶೇಖ್ ಪ್ರಕರಣ) ಇದು ದೇಶದ ಘನವೆತ್ತ ಕಾನೂನಿಗೆ ಮಾಡಿರುವ ಅಪಮಾನವಾಗಿದೆ ಎಂದು ತಿಳಿಸುತ್ತದೆ ಎಂದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ