CrimeNEWSರಾಜಕೀಯ

ನೀರಾವರಿ ನಂತರ ಅಬಕಾರಿ ಇಲಾಖೆ ಅಕ್ರಮ ಬಯಲು: ಮಾಜಿ ಸಿಎಂ ಎಚ್‌ಡಿಕೆ

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೀರಾವರಿ ಇಲಾಖೆಯ ₹20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ ಎಂದು ಪ್ರಶ್ನಿಸಿದ್ದಾರೆ.

₹2 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಬಿಎಸ್‌ವೈ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೋವಿಡ್‌ ಮತ್ತು ಬ್ಲಾಕ್‌ ಫಂಗಸ್‌ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು ಎಂದು ಛೇಡಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !