ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಆನ್ಲೈನ್ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ವಿದ್ಯಾರ್ಥಿಗಳು, ಪಾಲಕರು ಬೇಡಿಕೆ ಇಡುತ್ತಿದ್ದಾರೆ. ಆದರೆ, ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳಲ್ಲಿ ಎಲ್ಲಾ ಪರೀಕ್ಷೆಗಳು ( ಕಾಲೇಜುಗಳಲ್ಲಿ) ನಡೆಯುತ್ತವೆ. ಕಲವಿ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಆನ್ಲೈನ್ನಲ್ಲಿ ಪರೀಕ್ಷೆ ಮಾಡಿಕೊಳ್ಳುತ್ತಿವೆ. ನಮ್ಮಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಹೇಳಿದರು.
ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ-ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಾಸವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಆರಂಭವಾಗುತ್ತವೆ ಎಂದು ತಿಳಿಸಿದರು.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ( 2021- 22) ಮೊದಲು ಆನ್ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಕೊರೊನಾ ನಿಯಂತ್ರಣಕ್ಕೆ ಬಂದ ಕೂಡಲೇ ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಫ್ಲೈನ್ ಅಥವಾ ಆನ್ಲೈನ್ ತರಗತಿ ಆಯ್ಕೆ ಮಾಡಿಕೊಳ್ಳಬಹುದು. ಆದರೆ ಎರಡರಲ್ಲಿ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದರು.