NEWSದೇಶ-ವಿದೇಶರಾಜಕೀಯ

ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ಬೆಲೆ: ಇಂದಿನ ದರ ಎಷ್ಟು?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಆದರೆ ಇತ್ತೀಚೆಗೆ ಇಳಿತಕ್ಕಿಂತ ಏರಿಕೆಯೇ ಹೆಚ್ಚಾಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿಯನ್ನು ನಿರಂತರವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಕುತ್ತಲೆ ಇವೆ.

ಇನ್ನು ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರವೆಷ್ಟು ಎಂಬುರ ಬಗ್ಗೆ ವಿವರವನ್ನು ನೋಡುವುದಾದರೆ, ಮುಂಬೈ, ಜೈಪುರದಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 91 ರೂ. ದಾಟಿದೆ. ಹಾಗೆಯೇ ಚೆನ್ನೈ, ಪಾಟ್ನಾ, ಭುವನೇಶ್ವರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 87 ರೂ. ಆಸುಪಾಸಿನಲ್ಲಿದೆ. ಬೆಂಗಳೂರಿನಲ್ಲಿ 88.02 ರೂ ಹೈದರಾಬಾದ್​ನಲ್ಲಿ 88.63 ರೂ. ಇದೆ. ಬಹುತೇಕ ಎಲ್ಲ ನಗರಗಳಲ್ಲೂ ನಿನ್ನೆಗಿಂತ ಇಂದು ಪೆಟ್ರೋಲ್ ಬೆಲೆ 25 ಪೈಸೆಗೂ ಹೆಚ್ಚಾಗಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 85.20 ರೂ. ಇದೆ. ಮುಂಬೈನಲ್ಲಿ 91,80 ರೂ, ಜೈಪುರದಲ್ಲಿ 92.69 ರೂ, ಬೆಂಗಳೂರಿನಲ್ಲಿ 88.02 ರೂ ಹೈದರಾಬಾದ್​ನಲ್ಲಿ 88.63 ರೂ, ತಿರುವನಂತಪುರದಲ್ಲಿ 87.37 ರೂ, ಚೆನ್ನೈನಲ್ಲಿ 87.85 ರೂ, ಕೊಲ್ಕತ್ತಾದಲ್ಲಿ 86.63 ರೂ. ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯ ಸಂಗತಿ.

ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದೆ. ನಿನ್ನೆಗಿಂತ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಕೊಂಚ ಏರಿಕೆ ಕಂಡುಬಂದಿದೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಇದೇ ರೀತಿ ಇಂಧನದ ಬೆಲೆ ಏರಿಕೆ ಮುಂದುವರಿದರೆ 1 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೆಂಚುರಿ ಬಾರಿಸುವ ದಿನವೂ ದೂರವೇನಿಲ್ಲ!

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಆಗುತ್ತಿದ್ದರೂ, ಕೊರೊನಾ ಕಾರಣಗಳಿಂದ ಜನಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಲೆಕ್ಕಿಸದ ಸರ್ಕಾರಿ ಒಡೆತನದ ತೈಲ ಕಂಪನಿಗಳು ಸತತವಾಗಿ ಬೆಲೆ ಏರಿಕೆಯಲ್ಲಿ ನಿರತವಾಗಿವೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್