NEWSಕೃಷಿದೇಶ-ವಿದೇಶ

ಪ್ರತಿಭಟನಾ ರೈತರ ತೆರವುಗೊಳಿಸಲು ಸಾಧ್ಯವಿಲ್ಲ:  ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು 

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ನ್ಯೂಡೆಲ್ಲಿ: ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಇಲ್ಲಿ ನ್ಯಾಯಕ್ಕಾಗಿ ಹೋರಾಡಲು ಪ್ರತಿಯೊಬ್ಬರಿಗೂ ಹಕ್ಕಿದೆ. ಹೀಗಾಗಿ ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರಿಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ ಇಂದು ಮಹತ್ವದ ತೀರ್ಪು ನೀಡಿದೆ.

ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು 22 ದಿನಗಳಿಂದ ದೆಹಲಿ ಹೊರ ವಲಯದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಬಂದ್​ ಆಗಿದ್ದು, ಅವರನ್ನು ಅಲ್ಲಿಂದ ತೆರವುಗೊಳಿಸಲು ಆದೇಶ ನೀಡುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಲಾಗಿತ್ತು. ಆದರೆ, ಇಂದು ಆ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.

ಇನ್ನು ನಿನ್ನೆಯೂ  ಸಹ ಇದೇ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಾಧೀಶ ಎಸ್​.ಎ. ಬೊಬ್ಡೆ ಅವರಿದ್ದ ನ್ಯಾಯಪೀಠ, “ಈ ವಿಷಯವನ್ನು ಸಮಿತಿಯೊಂದಕ್ಕೆ ಹಸ್ತಾಂತರಿಸಬೇಕು. ಸಮಿತಿಯು ಕೃಷಿ ಜ್ಞಾನವನ್ನು ಹೊಂದಿರುವ ಸ್ವತಂತ್ರ ಸದಸ್ಯರನ್ನು ಹೊಂದಿರಬೇಕು ಮತ್ತು ಎರಡೂ ಕಡೆಯವರ ವಾದವನ್ನು ಆಲಿಸಿ ಸಮಸ್ಯೆಯನ್ನು ಬಗೆಹರಿಸುವಂತಿರಬೇಕು” ಎಂದು ತಿಳಿಸಿದ್ದರು.

ಇಂದು ರೈತ ಹೋರಾಟ ಕುರಿತು ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್​, ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಹಿಂಸಾಚಾರವಿಲ್ಲದೆ ಪ್ರತಿಭಟನೆಗಳು ಮುಂದುವರಿಯಬಹುದು. ಹೀಗಾಗಿ ಪೊಲೀಸರು ಈ ಹೋರಾಟವನ್ನು ನಿಗ್ರಹಿಸಲು ಮುಂದಾಗುವುದು ಸರಿಯಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ತಿಳಿಸಿದ್ದಾರೆ.

ಅರ್ಜಿ ವಿಚಾರಣೆ ವೇಳೆ ತಮ್ಮ ವಾದವನ್ನು ಮಂಡಿಸಿದ್ದ ಹಿರಿಯ ವಕೀಲ ಹರೀಶ್​ ಸಾಳ್ವೆ, “ಪ್ರತಿಭಟನೆಗಳು ಕೇವಲ ಪ್ರತಿಭಟನೆಗಳಾಗಿರಬಾರದು. ಈ ಹೋರಾಟದಿಂದ ಸಂಪೂರ್ಣ ದೃಷ್ಟಿಕೋನವನ್ನು ನಿರೂಪಿಸಲು ಸಾಧ್ಯವಿಲ್ಲ” ಎಂದಿದ್ದರು.  ಇದಕ್ಕೆ ಉತ್ತರ ನೀಡಿರುವ ಮುಖ್ಯ ನ್ಯಾಯಮೂರ್ತಿ  ಪ್ರತಿಭಟನೆಯ ಉದ್ದೇಶವು ಅಹಿಂಸಾತ್ಮಕ ವಿಧಾನಗಳಿಂದ ಈಡೇರಬೇಕು. ಪ್ರತಿಭಟನೆಗಳು ಸಮಸ್ಯೆಗಳ ಬಗ್ಗೆ ಇರಬೇಕು. ಅನ್ಯಾಯಕ್ಕೊಳಗಾದವರಿಗೆ ಪ್ರತಿಭಟಿಸಲು ತಮ್ಮ ಪರವಾದ ನ್ಯಾಯವನ್ನು ಮಂಡಿಸಲು ಅವಕಾಶ ನೀಡಬೇಕು ಮತ್ತು ಸಮಸ್ಯೆಗೆ ಕಾರಣವಾದ ವ್ಯಕ್ತಿಗಳು ಅದಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಚಳಿ, ಇಬ್ಬನಿ ಎನ್ನದೇ ನಿರಂತರವಾಗಿ ಕೃಷಿ ಕಾಯ್ದೆ ವಿರೋಧಿಸಿ ರೈತರು 22 ದಿನಗಳಿಂದ ದೆಹಲಿ ಹೊರ ವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಇಂದು ಮತ್ತೊಬ್ಬ ರೈತ ಮೃತಪಟ್ಟಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ