NEWSದೇಶ-ವಿದೇಶ

ಮೈತುಂಬ ಚಿನ್ನವನ್ನೇ ತೊಡುತ್ತಿದ್ದ ಗೋಲ್ಡ್‌ಮ್ಯಾನ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಪುಣೆ: ನಿತ್ಯ 9-10 ಕೆಜಿ ಬಂಗಾವರವನ್ನು ಮೈಮೇಲೆ ಹಾಕಿಕೊಂಡು ತಿರುಗಾಡುತ್ತಿದ್ದ ಗೋಲ್ಡ್‌ಮ್ಯಾನ್‌ ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ.

ಕತ್ತು, ಕೈ ಹೀಗೆ ದೇಹದ ನಾನಾ ಭಾಗದಲ್ಲಿ ಬರೋಬ್ಬರಿ 10 ಕೆಜಿ ಚಿನ್ನ ಧರಿಸುತ್ತಿದ್ದ ಈ ಕಾರಣಕ್ಕೆ ಗೋಲ್ಡ್‌ಮ್ಯಾನ್‌ ಎಂದೇ ಖ್ಯಾತಿ ಪಡೆದಿದ್ದ ಸಾಮ್ರಾಟ್‌ ಮೊಜೆ (39) ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ .

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ನಿನ್ನೆ ಹಠಾತ್‌ ಹೃದಯಘಾತವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.  ಇನ್ನು ಲಾಕ್‌ಡೌನ್‌ ಜಾರಿಯಲ್ಲಿದ್ದಿದ್ದರಿಂದ ಸಾಮ್ರಾಟ್‌ ಅವರ ಅಂತ್ಯಕ್ರಿಯೆ ಪುಣೆಯ ಯರವಾಡದಲ್ಲಿ ನೆರೆವೇರಿತು. .

ಗೋಲ್ಡ್‌ಮ್ಯಾನ್‌ ಎಂದ ಖ್ಯಾತಿ ಪಡೆದಿದ್ದ ಸಾಮ್ರಾಟ್‌ ದಪ್ಪದಾದ ಸರಗಳು , ಕೈಯಲ್ಲಿ ದಪ್ಪದ ಬ್ರಾಸ್‌ಲೈಟ್‌ಗಳನ್ನ ಧರಿಸಿಯೇ ಪುಣೆ ನಗರದಲ್ಲಿ ತಿರುಗಾಡುತ್ತಿದ್ದರು. ಈ ಹಿನ್ನೆಲೆ ಮೊಜೆ ಅವರನ್ನ ಜನರು ಗೋಲ್ಡ್ ಮ್ಯಾನ್‌ ಎಂದೇ ಕರೆಯುತ್ತಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಇನ್ನಿಬ್ಬರು ಗೋಲ್ಡ್‌ಮ್ಯಾನ್‌ಗಳು ಇಲ್ಲ..!
ಮಹಾರಾಷ್ಟ್ರದಲ್ಲಿ ಸಾಮ್ರಾಟ್‌ ಮೊಜೆ ಅವರಂತೆ ಇನ್ನು ಹಲವರು 9 ರಿಂದ 10 ಕೆಜಿಯಷ್ಟು ಚಿನ್ನ ಧರಿಸಿ ಓಡಾಡುವ ಉದ್ಯಮಿಗಳಿದ್ದಾರೆ. ಆ ಪೈಕಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. ಎಂಎನ್‌ಎಸ್‌ ಶಾಸಕ ರಮೇಶ್‌ ಎಂಬುವವರು ಕೂಡ ಇದೇ ರೀತಿ ಚಿನ್ನ ಧರಿಸುತ್ತಿದ್ದರು. ಅವರೂ 2011ರಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಇನ್ನು ಚಿನ್ನದ ಅಂಗಿ(ಶರ್ಟ್‌) ಧರಿಸುತ್ತಿದ್ದ ಉದ್ಯಮಿ ದತ್ತಾತ್ರೇಯ ಪುಂಗೆ ಎಂಬವರನ್ನು ದುಷ್ಕರ್ಮಿಗಳು 2016ರಲ್ಲಿ ಹತ್ಯೆಮಾಡಿದ್ದರು. ಇಂದು ಮೊಜೆ ನಿಧನರಾಗಿದ್ದು ಒಟ್ಟಾರೆ ಮೂವರು ಗೋಲ್ಡ್ ಮ್ಯಾನ್‌ಗಳನ್ನು ದೇಶ ಕಳೆದುಕೊಂಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

1 Comment

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ