NEWSನಮ್ಮರಾಜ್ಯಸಿನಿಪಥ

ಪವರ್‌ ಸ್ಟಾರ್‌ ಪುನೀತ್ ರಾಜ್‌ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಯುವರತ್ನ’ ಏಪ್ರಿಲ್ ನಲ್ಲಿ ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿಸುದ್ದಿ
ಬೆಂಗಳೂರು: ಹಾಡುಗಳಿಂದ ಭಾರೀ ಸದ್ದು ಮಾಡಿರುವ ಪವರ್‌ ಸ್ಟಾರ್‌  ಪುನೀತ್ ರಾಜ್‌ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವರತ್ನ’ ಚಿತ್ರ ತೆರೆಯ ಮೇಲೆ ಬರಲು ಸಿದ್ಧವಾಗಿದೆ.

ಹೌದು! ಏಪ್ರಿಲ್ ಒಂದರಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಕೊರೊನಾ ಲಾಕ್ಡೌನ್ ನಿಂದಾಗಿ ಲಾಕ್ ಆಗಿದ್ದ ಯುವರತ್ನ ಚಿತ್ರಕ್ಕೆ ಇದೀಗ ಬಿಡುಗಡೆ ಭಾಗ್ಯ ಬಂದಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

2018ರಲ್ಲಿ ಚಿತ್ರ ಸೆಟ್ಟೇರಿತ್ತು ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ 2019ರ ಏಪ್ರಿಲ್ 24ರ ರಾಜಕುಮಾರ್ ಹುಟ್ಟು ಹಬ್ಬದಂದು ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸಿತ್ತು. ಆದರೆ ಮಹಾಮಾರಿ ಕೊರೊನಾದಿಂದಾಗಿ ರಿಲೀಸ್ ಡೇಟ್ ಮುಂದಕ್ಕೆ ಹೋಗಿತ್ತು.

ಇದೀಗ ಚಿತ್ರತಂಡ ಬಾಕಿ ಉಳಿದುಕೊಂಡಿದ್ದ ಎರಡು ಹಾಡುಗಳನ್ನು ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಇದು ಮುಗಿದ ತಕ್ಷಣ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಪ್ರಚಾರವನ್ನು ಮುಗಿಸಿಕೊಂಡು ಏಪ್ರಿಲ್ ನಲ್ಲಿ ಬಿಗ್ ಸ್ಕ್ರೀನ್ ಮೇಲೆ ತರಲು ತಯಾರಿ ಮಾಡಿಕೊಂಡಿದೆ.

ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಬರೆದಿರುವ ಸಂತೋಷ್ ಆನಂದರಾಮ್ ಕುತೂಹಲ ಮೂಡಿಸಿದ್ದಾರೆ. ಪುನೀತ್ ರಾಜ್‌ಜಕುಮಾರ್, ಧನಂಜಯ್, ಸಹೇಷಾ, ಸೆಹಗಲ್, ದಿಗಂತ್, ಸೋನು ಗೌಡ ಮುಂತಾದ ಬಹು ತಾರಾಬಳಗವನ್ನು ಒಳಗೊಂಡಿದ್ದು, ಹೊಂಬಾಳೆ ಫಿಲಂಸ್ ನಡಿ ಚಿತ್ರ ನಿರ್ಮಾಣಗೊಂಡಿರುವುದು ಇನ್ನೊಂದು ವಿಶೇಷವಾಗಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್