CrimeNEWSದೇಶ-ವಿದೇಶ

16 ವಲಸೆ ಕಾರ್ಮಿಕರ ಸಾವು, ನಮಗೆ ನಾಚಿಕೆಯಾಗಬೇಕು ಎಂದ ರಾಹುಲ್‌ ಗಾಂಧಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಶುಕ್ರವಾರ ಮುಂಜಾನೆ 5 ಗಂಟೆಗೆ ಗೂಡ್ಸ್​ ರೈಲು ಹರಿದು ಮಧ್ಯಪ್ರದೇಶದ 16 ವಲಸೆ ಕಾರ್ಮಿಕರು ಮೃತಪಟ್ಟಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ವಲಸೆ ಕಾರ್ಮಿಕರು ಅಸುನೀಗಿರುವ ವಿಷಯ ಕೇಳಿ ನನಗೆ ಆಘಾತವಾಯಿತು, ಜತೆಗೆ ಈ ಕಾರ್ಮಿಕರ ಸಾವಿನ ಪ್ರಕರಣದಿಂದ ನಮಗೆ ನಾಚಿಕೆಯಾಗಬೇಕು ಎಂದು ಹೇಳಿದ್ದಾರೆ.

ಆ ದೇವರು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಲಾಕ್​ಡೌನ್​ನಿಂದ ಮಹಾರಾಷ್ಟ್ರದಲ್ಲಿ ಸಿಲುಕಿಕೊಂಡಿದ್ದ ಮಧ್ಯಪ್ರದೇಶದ ಕಾರ್ಮಿಕರು ರೈಲ್ವೆ ಹಳಿ ಅನುಸರಿಸಿ ತಮ್ಮ ಊರಿಗೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದರು. ಈ ವೇಳೆ ಸುಸ್ತಾಗಿದ್ದರಿಂದ ವಿಶ್ರಾಂತಿಗೆಂದು ನಿನ್ನೆ ರಾತ್ರಿ ಹಳಿ  ಮೇಲೆಯೇ ಮಲಗಿದ್ದರು. ಇಂದು ಬೆಳಗ್ಗೆ ಜಾಲ್ನಾದಿಂದ ಔರಂಗಾಬಾದ್​ನತ್ತ ತೆರಳುತ್ತಿದ್ದ ಗೂಡ್ಸ್​ ರೈಲು ಮಲಗಿದ್ದ ಈ ಕಾರ್ಮಿಕರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ 16 ಕಾರ್ಮಿಕರು ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಮಧ್ಯಪ್ರದೇಶ ಸರ್ಕಾರ 5 ಲಕ್ಷ ರೂ. ಪರಿಹಾರ ಧನ ಘೋಷಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ