NEWSಕೃಷಿನಮ್ಮರಾಜ್ಯ

ಕಾಂಗ್ರೆಸ್​ನಿಂದ ರಾಜಭವನ ಚಲೋ: ಸಂಚಾರ ದಟ್ಟಣೆ- ಪ್ರಯಾಣಿಕರ ಪರದಾಟ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೇಂದ್ರ ಸರ್ಕಾರದ ನೂತವ ಕೃಷಿ ಕಾಯ್ದೆ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ರ‍್ಯಾಲಿಯಲ್ಲಿ ನೂರಾರು ರೈತರು ಹಾಗೂ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಬೆಂಗಳೂರು–ಮೈಸೂರು ಹೆದ್ದಾರಿ, ಆನಂದರಾವ್‌ ವೃತ್ತ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿ ಹಲವೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

ಇನ್ನು ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಕಾರ್ಪೊರೇಷನ್, ವಿಧಾನಸೌಧ, ಬನಶಂಕರಿಯತ್ತ ತೆರಳುವ ವಾಹನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದೆ.

ಓಕಳಿಪುರಂ ಜಂಕ್ಷನ್‌ಗೆ ವಾಹನಗಳಿಗೆ ಪ್ರವೇಶ ಇಲ್ಲ. ಓಕಳಿಪುರಂನಿಂದ ಕೃಷ್ಣ ಫ್ಲೋರ್ ಮಿಲ್ ಕಡೆ ಡೈವರ್ಟ್ ಮಾಡಲಾಗಿದೆ. ಶಾಂತಲಾ ಸಿಲ್ಕ್ ನಿಂದ ಮೆಜೆಸ್ಟಿಕ್ ಗೆ ಬರುವ ವಾಹನ ಡೈವರ್ಟ್ ಮಾಡಲಾಗಿದೆ. ಮಲ್ಲೇಶ್ವರಂ ಸರ್ಕಲ್‌ನಲ್ಲಿಯೇ ವಾಹನಗಳ ಡೈವರ್ಟ್ ಮಾಡಲಾಗಿದ್ದು ರೇಸ್‌ಕೋರ್ಸ್ ರಸ್ತೆ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಈ ನಡುವೆ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರತಿಭಟನಾ ರ‍್ಯಾಲಿ ಆರಂಭವಾಗುತ್ತಿದ್ದಂತೆ ಕೆಲ ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ. ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಇಂದು ರ್ಯಾಲಿ ಆರಂಭವಾಗುತ್ತಿದ್ದಂತೆ ಶೇಷಾದ್ರಿ ರೋಡ್ ಬಂದ್ ಆಗಲಿದೆ. ಟ್ರಾಫಿಕ್ ನಿಯಂತ್ರಣಕ್ಕೆ 220 ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.

ಪಶ್ಚಿಮ ವಿಭಾಗ ಡಿಸಿಪಿ, ಕೇಂದ್ರ ವಿಭಾಗ ಡಿಸಿಪಿ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6ಕ್ಕೂ ಹೆಚ್ಚು ಕೆಎಸ್​ಆರ್​​ಪಿ ತುಕಡಿ ನಿಯೋಜನೆಗೊಂಡಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ