NEWSನಮ್ಮರಾಜ್ಯಸಂಸ್ಕೃತಿ

ಆಷಾಢ ಮಾಸ: 4 ಶುಕ್ರವಾರ, 2ಅಮಾವಾಸ್ಯೆ- ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಕೊರೊನಾ ಆತಂಕ ಇನ್ನು ಕಡಿಮೆಯಾಗಿಲ್ಲ. ಈ ನಡುವೆ ಆಷಾಢದಲ್ಲಿ ದೇವಸ್ಥಾನಕ್ಕೆ ಹೆಚ್ಚು ಹೆಚ್ಚು ಭಕ್ತರು ಆಗಮಿಸುತ್ತಾರೆ.

ಹೀಗೆ ಹೆಚ್ಚು ಭಕ್ತರು ಆಗಮಿಸಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹೇರಿದ್ದು, ನಾಲ್ಕು ಆಷಾಢ ಶುಕ್ರವಾರ ಮತ್ತು ಎರಡು ಅಮಾವಾಸ್ಯೆ ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.

ಯಾವ ದಿನಗಳಂದು ನಿರ್ಬಂಧ  
ಆಷಾಢ ಅಮಾವಾಸ್ಯೆ- ಜುಲೈ 9, ಮೊದಲನೇ ಆಷಾಢ ಶುಕ್ರವಾರ- ಜುಲೈ 16, ಎರಡನೇ ಆಷಾಢ ಶುಕ್ರವಾರ, ಅಮ್ಮನವರ ವರ್ಧಂತಿ – ಜುಲೈ 23.

ಮೂರನೇ ಆಷಾಢ ಶುಕ್ರವಾರ- ಜುಲೈ 30, ನಾಲ್ಕನೇ ಆಷಾಢ ಶುಕ್ರವಾರ- ಆಗಸ್ಟ್ 6, ಭೀಮನ ಆಮಾವಾಸ್ಯೆ – ಆಗಸ್ಟ್ 8.

ಇದರ ಜತೆಗೆ ಆಷಾಢ ಮಾಸದ ಶನಿವಾರ, ಭಾನುವಾರ ಮತ್ತು ಸರ್ಕಾರಿ ಸಾರ್ವತ್ರಿಕ ರಜಾ ದಿನಗಳಂದೂ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇಂದಿನಿಂದ (ಜುಲೈ 6) ಪ್ರತಿದಿನ ಸಂಜೆ 6 ಗಂಟೆ ನಂತರವೂ ಭಕ್ತರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಕೊರೊನಾ ಹರಡುವ ಭೀತಿ ಹಿನ್ನೆಲೆ ಜಿಲ್ಲಾಡಳಿತ ಈ ನಿರ್ಧಾರ ತೆಗೆದುಕೊಂಡಿದೆ. ಚಾಮುಂಡಿ ಬೆಟ್ಟಕ್ಕೆ ಕೇವಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದು, ಅರ್ಚಕರಿಂದ ಪೂಜಾ, ವಿಧಿವಿಧಾನ ಕಾರ್ಯಕ್ರಮಗಳು ನಡೆಸಲು ಯಾವುದೇ ಅಡ್ಡಿ ಇಲ್ಲ ಎಂದು ತಿಳಿಸಿದೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...