NEWSನಮ್ಮರಾಜ್ಯರಾಜಕೀಯವಿಜ್ಞಾನ

ರಸ್ತೆಗಿಳಿದ ಬಸ್‌ಗಳ ಮೇಲೆ ಕಲ್ಲು ತೂರಾಟ-ಹಾನಿ, ಚಾಲಕನ ತಲೆಗೂ ಪೆಟ್ಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಗೆ ಇಳಿದಿದ್ದು, ಇದರ ಮಧ್ಯೆ ಬಸ್‌ಗಳನ್ನು ಬೆರಳೆಣಿಕೆಯ ಬಸ್‌ಗಳು ರಸ್ತೆಗೆ ಇಳಿದ್ದರಿಂದ ಬಸ್‌ ಕಿಟಕಿಯ ಗಾಜುಗಳು ಪುಡಿಪುಡಿಗಿರುವ ಮತ್ತು ಚಾಲಕರು ಗಾಯಗೊಂಡಿರುವ ಘಟನೆಗಳು ನಡೆದಿವೆ.

ಆನೇಕಲ್‌ ಬಳಿ ಬಿಎಸ್‌ಟಿಸಿ ಬಸ್‌ ಮೇಲೆ ಕಲ್ಲು ತೂರಿದ್ದು ಚಾಲಕನ ತಲೆಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ರಾಮನಗರದಲ್ಲಿ ಸಂಚರಿಸುತ್ತಿದ್ದ ಬಸ್‌ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದಾರೆ. ಅದೇರೀತಿ ಕೋಲಾರದ ಬಂಗಾರಪೇಟೆಯಲ್ಲೂ ಬಸ್‌ ಮೇಲೆ ಕಲ್ಲು ತೂರಿ ಮುಂದಿನ ಗ್ಲಾಸ್‌ ಪುಡಿಪುಡಿ ಮಾಡಲಾಗಿದೆ.

ಕಲಬುರಗಿಯ ಕೋರ್ಟ್‌ ಬಳಿ ಕಲ್ಲು ತೂರಾಟ ಮಾಡಿದ್ದು ಬಸ್‌ ಜಖಂಗೊಂಡಿದೆ. ಇದನ್ನು ಪ್ರತಿಭಟನಾ ನಿರತರು ಮಾಡುತ್ತಿದ್ದಾರೋ ಇಲ್ಲ ಕಿಡಿಗೇಡಿಗಳು ಮಾಡುತ್ತಿದ್ದಾರೋ ಎಂಬುವುದು ಮಾತ್ರ ತಿಳಿದು ಬಂದಿಲ್ಲ. ಒಟ್ಟಾರೆ ಸಾರಿಗೆ ನೌಕರರ ಮುಷ್ಕರದಿಂದ ಕೆಲ ಅಹಿತಕರ ಘಟನೆಗಳು ನಡೆಯುತ್ತಿವೆ. ಇನ್ನೊಂದೆಡೆ ಕೆಲ ಆಟೋ ಚಾಲಕರು ಪ್ರಯಾಣಿಕರ ಜೇಬಿಗೆ ನೇರವಾಗಿಯೇ ಕತ್ತರಿಯಾಕುತ್ತಿದ್ದು, ದುಪ್ಪಟ್ಟು ವಸೂಲಿಗೆ ಇಳಿದಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.

1 Comment

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್