NEWSದೇಶ-ವಿದೇಶರಾಜಕೀಯ

ಸರ್ಕಾರದ ರಹಸ್ಯ ಮಾಹಿತಿ ಸೋರಿಕೆ ಕ್ರಿಮಿನಲ್‌ ಅಪರಾಧ : ಮೋದಿ ವಿರುದ್ಧ ರಾಹುಲ್‌ ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಸರ್ಕಾರದ ರಹಸ್ಯ ಮಾಹಿತಿಯನ್ನು ಪ್ರಧಾನಿಯೇ ಒಬ್ಬ ಪತ್ರಕರ್ತನಿಗೆ ನೀಡಿರುವುದು ಕ್ರಿಮಿನಲ್‌ ಅಪರಾಧ. ಹೀಗಾಗಿ ಈ ರಹಸ್ಯ ಮಾಹಿತಿಯನ್ನು ನೀಡಿರುವ ಹಾಗೂ ಪಡೆದಿರುವ ವ್ಯಕ್ತಿ ಗಳಿಬ್ಬರನ್ನೂ ಜೈಲಿಗೆ ಕಳಿಸಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಮಾಹಿತಿ ಸೋರಿಕೆ ಹೇಗಾಯಿತು ಎಂಬ ಬಗ್ಗೆ ತನಿಖೆ ನಡೆಸಿ, ಮಾಹಿತಿ ನೀಡಿದ ಹಾಗೂ ಪಡೆದ ವ್ಯಕ್ತಿಗಳನ್ನು ಜೈಲಿಗೆ ಅಟ್ಟಬೇಕು. ಪ್ರಧಾನಿಯೇ ಈ ಪತ್ರಕರ್ತನಿಗೆ ಮಾಹಿತಿ ಕೊಟ್ಟಿರುವ ಸಾಧ್ಯತೆ ಇದೆ. ಹೀಗಾಗಿ ಈ ಕುರಿತು ತನಿಖೆ ನಡೆಯುವುದೇ ಇಲ್ಲ ಎಂದೂ ಆಪಾದಿಸಿದ್ದಾರೆ.

ಬಾಲಾಕೋಟ್‌ ಮೇಲೆ ನಡೆದ ವೈಮಾನಿಕ ದಾಳಿಗೂ ಮುನ್ನ ಈ ಮಾಹಿತಿಯನ್ನು ರಿಪಬ್ಲಿಕ್‌ ಟಿವಿ ಮುಖ್ಯ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರ ವಾಟ್ಸ್‌ಆ್ಯಪ್‌ ಚಾಟ್‌ನಲ್ಲಿ ಉಲ್ಲೇಖಿಸಲಾಗಿತ್ತು ಎಂಬ ಮಾಹಿತಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ದಾಳಿ ಕುರಿತು ಅರ್ನಬ್ ಗೋಸ್ವಾಮಿಗೆ ಮುಂಚಿತವಾಗಿಯೇ ಮಾಹಿತಿ ಇತ್ತು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದರು.

2019ರ ಫೆ. 26ರಂದು ಪಾಕಿ ಸ್ತಾನದ ಬಾಲಾಕೋಟ್‌ ಮೇಲೆ ಭಾರತ ವಾಯುದಾಳಿ ನಡೆಸಿತ್ತು. ಈ ದಾಳಿ ನಡೆಯುವುದಕ್ಕೂ ಕೆಲ ದಿನಗಳ ಮುಂಚೆ ರಿಪಬ್ಲಿಕ್‌ ಟಿವಿಯ ಮುಖ್ಯ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರು ಬಾರ್ಕ್‌ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ಥೋ ದಾಸ್‌ಗುಪ್ತಾ ಅವರೊಂದಿಗೆ ಚಾಟ್‌ ನಡೆಸಿದ್ದರು. ‍ಪಾಕಿಸ್ತಾನದ ಮೇಲೆ ಭಾರಿ ವೈಮಾನಿಕ ದಾಳಿ ನಡೆಯುವ ಕುರಿತು ಈ ಚಾಟ್‌ನಲ್ಲಿ ಪ್ರಸ್ತಾಪಿಸಲಾಗಿತ್ತು ಎನ್ನಲಾಗಿದೆ.

ವೈಮಾನಿಕ ದಾಳಿಯ ಬಗ್ಗೆ ಗೋಸ್ವಾಮಿಗೆ ಗೊತ್ತಿದ್ದಲ್ಲಿ ಹಾಗೂ ಈ ಬಗ್ಗೆ ಅವರು ವಾಟ್ಸ್‌ಆ್ಯಪ್‌ ಚಾಟ್‌ನಲ್ಲಿ ಪ್ರಸ್ತಾಪಿಸಿದ್ದು ನಿಜವೇ ಆಗಿದ್ದಲ್ಲಿ, ಈ ಮಾಹಿತಿ ಪಾಕಿಸ್ತಾನದವರಿಗೂ ಗೊತ್ತಿರುತ್ತದೆ. ಹೀಗಾಗಿ ಇದು ಕ್ರಿಮಿನಲ್‌ ಅಪರಾಧವಾಗುವ ಕಾರಣ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇವರು ತಮ್ಮನ್ನು ತಾವು ದೇಶ ಪ್ರೇಮಿಗಳು ಎಂದು ಕರೆದುಕೊಳ್ಳುತ್ತಾರೆ. ಆದರೆ, ದೇಶದ ವಾಯುಪಡೆಯನ್ನು ಅಪಾಯಕ್ಕೆ ಸಿಲುಕಿಸುವುದು, ವೈಮಾನಿಕ ದಾಳಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ದೇಶಪ್ರೇಮವಾಗದು ಎಂದು ಕಿಡಿಕಾರಿದ್ದಾರೆ.

ಇನ್ನು  ಪ್ರಧಾನಿ, ರಕ್ಷಣಾ ಮಂತ್ರಿ, ಗೃಹ ಸಚಿವ, ವಾಯುಪಡೆ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರರಿಗೆ ಮಾತ್ರ ಈ ವೈಮಾನಿಕ ದಾಳಿ ಕುರಿತ ಮಾಹಿತಿ ಇರುತ್ತದೆ. ಕಾರ್ಯಾಚರಣೆ ನಡೆಸುವ ಪೈಲಟ್‌ಗೂ ಈ ಬಗ್ಗೆ ಮಾಹಿತಿ ನೀಡಲಾಗುವುದಿಲ್ಲ. ಆದರೆ, ಈ ಐದು ಜನರ ಪೈಕಿಯೇ ಒಬ್ಬರು ಈ ಪತ್ರಕರ್ತನಿಗೆ ಮಾಹಿತಿ ನೀಡಿರಲು ಸಾಧ್ಯ ಎಂದು ಆರೋಪಿಸಿದರು.

 

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ