NEWSದೇಶ-ವಿದೇಶನಮ್ಮರಾಜ್ಯ

ಬೆಳಗಾವಿ ಗಡಿ ಪ್ರವೇಶಿಸಲು ಯತ್ನಿಸಿದ ಶಿವಸೇನಾ ಕಾರ್ಯಕರ್ತರು: ಬಿಡದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಕನ್ನಡಪರ ಹೋರಾಟಗಾರರು ಬೆಳಗಾವಿ ಮಹಾನಗರಪಾಲಿಕೆ ಎದುರು ಧ್ವಜಸ್ತಂಭ ಸ್ಥಾಪಿಸಿ ಕನ್ನಡ ಬಾವುಟ ಹಾರಿಸಿರುವುದನ್ನು ತೆರವುಗೊಳಿಸಿ ಭಗವಾಧ್ವಜ ಹಾರಿಸಲು ಗುರುವಾರ ಬರುತ್ತಿದ್ದ ನೆರೆಯ ಮಹಾರಾಷ್ಟ್ರದ ಶಿವಸೇನಾ ಕಾರ್ಯಕರ್ತರನ್ನು ರಾಜ್ಯದ ಪೊಲೀಸರು ಗಡಿಯಲ್ಲೇ ತಡೆದರು.

ರಾಜ್ಯದ ಗಡಿ ತಾಲೂಕಿನ ಶಿನ್ನೋಳಿಯಲ್ಲಿ ಸೇರಿದ್ದ ಕಾರ್ಯಕರ್ತರು, ಗಡಿಯಲ್ಲಿ ತಮ್ಮನ್ನು ತಡೆದ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ಜಟಾಪಟಿ ನಡೆಸಿದರು. ಪೊಲೀಸರನ್ನು ತಳ್ಳಾಡಿ ಉದ್ಧಟತನದಿಂದ ವರ್ತಿಸಿದರು.

ಪಾಲಿಕೆ ಮುಂಭಾಗದ ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾವು ಬೆಳಗಾವಿ ಮಹಾನಗರಪಾಲಿಕೆ ಎದುರು ಭಗವಾಧ್ವಜ ಸ್ಥಾಪಿಸುತ್ತೇವೆ ಎಂದು ಜೈ ಭವಾನಿ, ಜೈ ಶಿವಾಜಿ ಎಂಬ ಘೋಷಣೆಗಳೊಂದಿಗೆ ನುಗ್ಗುತ್ತಿದ್ದರು.

ಶಿವಸೇನಾ ಕೊಲ್ಹಾಪುರ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ದಾವಣೆ ನೇತೃತ್ವದಲ್ಲಿ ಕಾರ್ಯಕರ್ತರು ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲೂಕಿನ ಕಡೆಯಿಂದ ಬಂದು ಜಮಾಯಿಸಿದ್ದರು. ಮುನ್ಸೂಚನೆ ಇದ್ದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು ಆ ಕಾರ್ಯಕರ್ತರನ್ನು ತಡೆದರು. ಹೀಗಾಗಿ, ಅರ್ಧ ಗಂಟೆಯವರೆಗೆ ರಸ್ತೆಯಲ್ಲೇ ಪ್ರತಿಭಟಿಸಿ ಮರಳಿದರು. ಮುಂಜಾಗ್ರತಾ ಕ್ರಮವಾಗಿ ಗಡಿಯಲ್ಲಿ ಪೊಲೀಸ್ ಭದ್ರತೆ ಮುಂದುವರಿದಿದೆ.

ಈ ನಡುವೆ, ಕೋನೆವಡಿ ಗ್ರಾಮದಲ್ಲಿ ಶಿವಸೇನಾದವರು ಭಗವಾಧ್ವಜ ಹಾರಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಹಾರಾಷ್ಟ್ರ ಏಕೀಕ ರಣ ಸಮಿತಿ ನಗರದಲ್ಲಿ ಕೈಗೊಂಡಿದ್ದ ಮೆರವಣಿಗೆಯನ್ನು ಪೊಲೀಸರ ಅನುಮತಿ ಸಿಗದ ಕಾರಣ ಮುಂದೂಡಿತು.

Leave a Reply

error: Content is protected !!
LATEST
ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ