CrimeNEWS

ಕುಡಿದ ಮತ್ತಿನಲ್ಲಿ ಜೀವಂತ ಹಾವನ್ನೇ ಕಚ್ಚಿ ಕಚ್ಚಿ ಸಾಯಿಸಿದ ಪಾಪಿ

ವಿಜಯಪಥ ಸಮಗ್ರ ಸುದ್ದಿ

ಮುಳಬಾಗಿಲು: ಕುಡಿದ ಅಮಲಿನಲ್ಲಿ ಜೀವಂತ ಹಾವನ್ನೇ ಕಚ್ಚಿ ಸಾಯಿಸುವ ಮೂಲಕ ವಿಕೃತಿ ಮೆರೆದ ಘಟನೆ ಮಂಗಳವಾರ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕುಮಾರ್‌ ಎಂಬಾತನೆ ಕುಡಿದ ಅಮಲಿನಲ್ಲಿ ಹಾವನ್ನು ಭೀಕರವಾಗಿ ಕಚ್ಚಿ ಸಾಯಿಸಿದ ಕಿಡಿಗೇಡಿ. ಸೆಂಟ್ರಿಂಗ್‌ ಕೆಲಸ ಮಾಡುವ ಈತ ಸೋಮವಾರ ನಂಗಲಿ ಗ್ರಾಮದ ಬಾರ್‌ ಒಂದರಲ್ಲಿ ವೈನ್‌ಖರೀದಿಸಿ ಅಲ್ಲೇ ಅರ್ಧ ಕುಡಿದಿದ್ದ ಇನ್ನು ಉಳಿದ ಮದ್ಯವನ್ನು ಮಂಗಳವಾರ ಬೆಳಗ್ಗೆ ತೋಟಕ್ಕೆ ಹೋಗಿ ಕುಡಿದಿದ್ದಾನೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಈ ವೇಳೆ ತೋಟದಲ್ಲಿ ಹೋಗುತ್ತಿದ್ದ ಹಾವನ್ನು ಕಂಡು ಅದನ್ನು ಹಿಡಿದುಕೊಂಡು ಬಂದ ಈ ಕುಡುಕ ಅದನ್ನು ಕಚ್ಚಿ ಅರ್ಧಂಬರ್ಧ ಸಾಯಿಸಿದ್ದಾನೆ. ಅಷ್ಟೇ ಅಲ್ಲದೆ ಅದನ್ನು ಕುತ್ತಿಗೆಗೆ ಹಾಕಿಕೊಂಡು ಬೈಕ್‌ನಲ್ಲಿ ಗ್ರಾಮಕ್ಕೆ ಬಂದಿದ್ದಾನೆ. ಅದನ್ನು ಕಂಡ ಗ್ರಾಮಸ್ಥರು ಹೌಹಾರಿದ್ದಲ್ಲದೇ ಹಾವನ್ನು ತೆಗೆದುಹಾಕುವಂತೆ ಹೇಳಿದ್ದಾರೆ. ಆದರೆ ಅಮಲು ನೆತ್ತಿಗೇರಿದ್ದರಿಂದ  ಆತ ಬೈಕ್‌ನಲ್ಲಿ ಕುಳಿತುಕೊಂಡೇ ಇನ್ನು ಉಳಿದಿದ್ದ ಚಿಟುಕಿಯಷ್ಟು ಮದ್ಯವನ್ನು ಸೇವಿಸುತ್ತ ಮತ್ತೆ ಆ ಹಾವನ್ನು ಕಚ್ಚಿದ್ದಾನೆ ಮೊದಲ ಅರ್ಧಂಬರ್ಧ ಸಾತ್ತಿದ್ದ ಹಾವು ಈತ ಮತ್ತೆ ನೀಡಿದ ಹಿಂಸೆಗೆ  ಸತ್ತುಹೋಗಿದೆ. ಆದರೂ  ಆತನಿಗೆ ಯಾವುದೇ ತೊಂದರೆ ಆಗಿಲ್ಲ ಎಂದು  ಗ್ರಾಮಸ್ಥರು ಹೇಳಿದ್ದಾರೆ.

ಅದು ಏನೆ ಇರಲಿ ಕುಡಿದ ಮತ್ತಿನಲ್ಲಿದ್ದೇನೆ ಎಂದು ಹಾವನ್ನು ಹಿಡಿದು ಕಚ್ಚಿ ಚಿತ್ರಹಿಂಸೆ ನೀಡಿ ಸಾಯಿಸಿರುವುದು ಅಪರಾಧವಾಗುತ್ತದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಇಂಥ ಕೃತ್ಯ ಎಸಗಿರುವ ಪಾಪಿಗೆ ಶಿಕ್ಷೆ ಕೊಡಿಸಲು ಮುಂದಾಗಬೇಕಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ