NEWSಆರೋಗ್ಯಕ್ರೀಡೆದೇಶ-ವಿದೇಶ

ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ: ಇಂದು ಡಿಸ್ಚಾರ್ಜ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತಾ: ಲಘು ಹೃದಯಸ್ತಂಭನ ದಿಂದಾಗಿ ಅ್ಯಂಜಿಯೊಪ್ಲಾಸ್ಟಿ ಚಿಕಿತ್ಸೆ ಪಡೆದ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷ (ಬಿಸಿಸಿಐ) ಸೌರವ್ ಗಂಗೂಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಇಂದು ತಮ್ಮ ಮನೆಗೆ ತೆರಳಲಿದ್ದಾರೆ ಎಂದು ವುಡ್‌ಲ್ಯಾಂಡ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ರೂಪಾಲಿ ಬಸು ತಿಳಿಸಿದ್ದಾರೆ.

48 ವರ್ಷದ ಗಂಗೂಲಿ ಅವರ ಆರೋಗ್ಯದ ಕುರಿತು ಸುದ್ದಿಗಾರರರಿಗೆ ಮಾಹಿತಿ ನೀಡಿದ ಅವರು, ’ ವೈದ್ಯರ ಒಂದು ತಂಡವು ಗಂಗೂಲಿ ಅವರ ಆರೋಗ್ಯದ ಬಗ್ಗೆ ಅವರ ನಿವಾಸದಲ್ಲಿಯೇ ನಿಗಾ ವಹಿಸುತ್ತದೆ. 2-3 ವಾರಗಳ ಬಳಿಕ ಮುಂದಿನ ಹಂತದ ವೈದ್ಯಕೀಯ ಚಿಕಿತ್ಸೆಗೆ ಸಿದ್ಧರಾಗಲಿದ್ದಾರೆ‘ ಎಂದು ತಿಳಿಸಿದ್ದಾರೆ.

ಗಂಗೂಲಿ ಅವರಿಗೆ ಕಳೆದ ಶನಿವಾರ ಲಘು ಹೃದಯಸ್ತಂಭನವಾಗಿತ್ತು. ಹೀಗಾಗಿ ಕನ್ನಡಿಗ ಹೃದ್ರೋಗ ತಜ್ಞ ಡಾ. ದೇವಿಶೆಟ್ಟಿ ಗಂಗೂಲಿ ಅವರನ್ನು ನೋಡಿಕೊಳ್ಳುತ್ತಿದ್ದ ವೈದ್ಯರ ತಂಡವನ್ನು ಭೇಟಿ ಮಾಡಿದ್ದಾರೆ. ಗಂಗೂಲಿ ಅವರನ್ನು ತಪಾಸಣೆ ಮಾಡಿದ್ದಾರೆ.

ಲಘು ಹೃದಯಸ್ತಂಭನದಿಂದ ಅವರ ಹೃದಯಕ್ಕೆ ಹೆಚ್ಚು ಹಾನಿಯೇನೂ ಆಗಿಲ್ಲ. ಅವರು 20ನೇ ವಯಸ್ಸಿನಲ್ಲಿದ್ದಷ್ಟೇ ಆರೋಗ್ಯವಾಗಿದ್ದಾರೆ. ತಮ್ಮ ಎಂದಿನ ಜೀವನಶೈಲಿಗೆ ಬಹುಬೇಗ ಮರಳಲಿದ್ದಾರೆ‘ ಎಂದು ದೇವಿಶೆಟ್ಟಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್