NEWSಕ್ರೀಡೆದೇಶ-ವಿದೇಶ

ಪ್ಯಾರಾಲಿಂಪಿಕ್‌ನಲ್ಲಿ ಬೆಳ್ಳಿ ಗೆದ್ದ ಭಾವಿನಾ ಪಟೇಲ್‌ಗೆ 3 ಕೋಟಿ ರೂ. ಬಹುಮನ ಘೋಷಿಸಿದ ಗುಜರಾತ್ ಸರ್ಕಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೆಹ್ಸಾನಾ: ಟೋಕಿಯೋ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾವಿನಾ ಪಟೇಲ್ ಅವರಿಗೆ ಬಹುಮಾನಗಳ ಮಳೆ ಶುರುವಾಗಿದೆ. ಈ ನಿಟ್ಟಿನಲ್ಲಿ ಗುಜರಾತ್ ಸರ್ಕಾರದಿಂದ ಮೂರು ಕೋಟಿ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ.

ಭಾವಿನಾ ಟೇಬಲ್ ಟೆನ್ನಿಸ್ ಕ್ಲಾಸ್ 4. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದರು. ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ದೇಶದ ಎರಡನೇ ಮಹಿಳಾ ಆಟಗಾರ್ತಿ ಭಾವಿನಾ. ಅದೇ ಸಮಯದಲ್ಲಿ, ಟೇಬಲ್ ಟೆನ್ನಿಸ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯರು ಸಹ ಆಗಿದ್ದಾರೆ.

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಸಣ್ಣ ಕಿರಾಣಿ ಅಂಗಡಿಯನ್ನು ನಡೆಸುತ್ತಿರುವ ಹಸ್ಮುಖಭಾಯಿ ಪಟೇಲ್ ಅವರ ಮಗಳಾದ ಭಾವಿನಾ ಅವರು ಪದಕ ಗೆಲ್ಲುವ ಸ್ಪರ್ಧಿ ಎಂದು ಯಾರು ಪರಿಗಣಿಸಿರಲಿಲ್ಲ. ಆದರೆ ಅವರು ತಮ್ಮ ಅದ್ಭುತ ಪ್ರದರ್ಶನದಿಂದ ಇತಿಹಾಸವನ್ನು ಸೃಷ್ಟಿಸಿದರು. ಈ ವಿಜಯದ ನಂತರ, ದೇಶದಾದ್ಯಂತ, ವಿಶೇಷವಾಗಿ ಭಾವಿನಾ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಸಂಭ್ರಮದ ವಾತಾವರಣವಿದೆ.

ಬಹುಮಾನ ಘೋಷಿಸಿದ ಗುಜರಾತ್ ಸರ್ಕಾರ
ಈ ಪ್ರತಿಭೆಯನ್ನು ಗೌರವಿಸುವುದಕ್ಕೆ ಈಗ ಗುಜರಾತ್ ಸರ್ಕಾರ ಮುಂದಾಗಿದೆ. ಅವರು ಭಾರತಕ್ಕೆ ಬರುವ ಮುನ್ನವೇ ಸರ್ಕಾರ ಮೂರು ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಇದಲ್ಲದೇ, ಬೆಳ್ಳಿ ಪದಕ ವಿಜೇತೆಗೆ ಸರ್ಕಾರಿ ಉದ್ಯೋಗವನ್ನೂ ನೀಡಲಾಗುವುದು ಎಂದು ಹೇಳಿದೆ.

ಭಾವಿನಾ ಪಟೇಲ್ ತನ್ನ ವೃತ್ತಿ ಜೀವನದಲ್ಲಿ ಹಣದ ಕೊರತೆಯಿಂದ ಸಾಕಷ್ಟು ಕಷ್ಟಪಟ್ಟಿದ್ದರು. ಅದೇ ಸಮಯದಲ್ಲಿ, ಅವರು ಕೆಲಸಕ್ಕಾಗಿ ಸಾಕಷ್ಟು ಕಷ್ಟಪಟ್ಟಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾವಿನಾ ಅವರನ್ನು ವಿಜಯ್ ರೂಪಾನಿ ಅಭಿನಂದಿಸಿದರು.

ಟೋಕಿಯೋ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾವಿನಾ ಪಟೇಲ್ ಅವರಿಗೆ ಅಭಿನಂದನೆಗಳು. ಭಾವಿನಾ ಅವರಿಗೆ ಗುಜರಾತ್ ಸರ್ಕಾರದಿಂದ ಮೂರು ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾವಿನಾ ಮನೆಯಲ್ಲಿ ಹಬ್ಬದ ವಾತಾವರಣ
ಭಾವಿನಾ ಪಟೇಲ್ ಗೆಲುವಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ತಂದೆ, ಭಾವಿನಾ ಅಂಗವಿಕಲೆಯಾಗಿರಬಹುದು ಆದರೆ ನಾವು ಅವಳನ್ನು ಎಂದಿಗೂ ಆ ರೀತಿ ನೋಡಿಲ್ಲ. ನಮಗೆ ಅವರು ದೈವಿಕ. ಅವರು ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿರುವುದಕ್ಕೆ ನಮಗೆ ಅತ್ಯಂತ ಸಂತೋಷವಾಗಿದೆ ಎಂದಿದ್ದಾರೆ.

ಭಾವಿನಾ ಪಟೇಲ್ ಅವರ ಆಟ ವಿಕ್ಷೀಸಲು ಗ್ರಾಮದಲ್ಲಿ ದೊಡ್ಡ ಪರದೆಯನ್ನು ಅಳವಡಿಸಲಾಗಿತ್ತು. ಜನರು ಪಂದ್ಯವನ್ನು ವೀಕ್ಷಿಸಲು ಬೆಳಗ್ಗೆಯಿಂದಲೇ ಜಮಾಯಿಸಿದ್ದರು. ಭಾವಿನಾ ಬೆಳ್ಳಿ ಗೆದ್ದ ಬಳಿಕ ಅಲ್ಲಿ ನೆರದಿದ್ದ ಎಲ್ಲರೂ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ