Breaking NewsNEWSಕ್ರೀಡೆನಮ್ಮರಾಜ್ಯ

ಕಬಡ್ಡಿ ಆಟಗಾರ್ತಿ ತೇಜಸ್ವಿನಿ ಬಾಯಿಗೆ 2 ಲಕ್ಷ ರೂ. ನೆರವು: ಸಿಎಂ ಬಿಎಸ್‌ವೈ ಘೋಷಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಂಕಷ್ಟದಲ್ಲಿದ್ದ ಕರ್ನಾಟಕದ ಕಬಡ್ಡಿ ಆಟಗಾರ್ತಿ ತೇಜಸ್ವಿನಿ ಬಾಯಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 2 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಕೋವಿಡ್‌ನಿಂದ ಇತ್ತೀಚೆಗೆ ಅವರು ಪತಿಯನ್ನು ಕಳೆದುಕೊಂಡಿದ್ದರು. ಅರ್ಜುನ ಪ್ರಶಸ್ತಿ ಪುರಸ್ಕೃತೆ ತೇಜಸ್ವಿನಿ ಅವರು ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಭಾರತ ತಂಡದ ಸದಸ್ಯೆಯಾಗಿದ್ದರು. ಇದೀಗ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ಅವರ ನೆರವಿಗೆ ಸರ್ಕಾರ ಧಾವಿಸಿದೆ.

ಪತಿಯನ್ನು ಕಳೆದುಕೊಂಡಿರುವ ಕಬಡ್ಡಿ ಆಟಗಾರ್ತಿ ಕರ್ನಾಟಕದ ತೇಜಸ್ವಿನಿ ಬಾಯಿ ಅವರ ನೆರವಿಗೆ ಕೇಂದ್ರ ಕ್ರೀಡಾ ಸಚಿವಾಲಯ ಧಾವಿಸಿದ್ದು 2ಲಕ್ಷರೂ ಸಹಾಯಧನ ಒದಗಿಸುವುದಾಗಿ ಶುಕ್ರವಾರ ಘೋಷಿಸಿತ್ತು.

ಏಷ್ಯನ್ ಕ್ರೀಡಾಕೂಟದಲ್ಲಿ ಎರಡು ಬಾರಿ ಚಿನ್ನದ ಪದಕ ಗೆದ್ದಿರುವ ತೇಜಸ್ವಿನಿ ಅವರ ಪತಿ ನವೀನ್ ಮೇ 11ರಂದು ಸೋಂಕಿನಿಂದ ಪಟ್ಟಿದ್ದರು ಅವರಿಗೆ ಮೇ 1ರಂದು ಕೊರೊನಾ ಪಾಸಿಟಿವ್‌ ಎಂದು ದೃಢಪಟ್ಟಿತ್ತು.

ಈ ಕೋವಿಡ್ಕೋ‌ ಬಿಕ್ಕಟ್ಟಿನ ಸಂದರ್ಭದಲ್ಲಿ ಮಾಜಿ ಅಥ್ಲೆಟ್ ಗಳು ಹಾಗೂ ಕೋಚ್‌ಗಳಿಗೆ ನೆರವು ನೀಡುವ ಕಾರ್ಯಕ್ರಮದಡಿ ಭಾರತ ಒಲಂಪಿಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ಧನಸಹಾಯ ಮಂಜೂರು ಮಾಡಿದೆ.

ನನ್ನ ಪತಿಗೆ ಕೇವಲ 30 ವರ್ಷ ವಯಸ್ಸಾಗಿತ್ತು. ಆದರೆ, ತಮ್ಮ ತಂದೆಯ ನಿಧನದಿಂದಾಗಿ ಅವರು ಎದೆಗುಂದಿದ್ದರು. ಇದೆ ಆತಂಕ ಹಾಗೂ ಒತ್ತಡ ಅವರ ಜೀವ ತೆಗೆದುಕೊಂಡಿತು ಎಂದು ತೇಜಸ್ವಿನಿ ಹೇಳಿದ್ದಾಗಿ ಭಾರತ ಕ್ರೀಡಾ ಪ್ರಾಧಿಕಾರ ತಿಳಿಸಿದೆ.

ನಾನು ನೆರವು  ನಿರೀಕ್ಷಿಸಿರಲಿಲ್ಲ. ಆದರೆ, ಮೊದಲ ಬಾರಿಗೆ ಕ್ರೀಡಾ ಸಚಿವಾಲಯ ಸಾಯ್‌ ಈ ಕುರಿತು ಕ್ಷಿಪ್ರ ನಿರ್ಧಾರ ತೆಗೆದುಕೊಂಡಿದೆ. ಇಂತಹ ನೆರವು ಇದೇ ಮೊದಲ ಬಾರಿ ನನಗೆ ಸಿಗುತ್ತಿದೆ. ನನಗೆ ಐದು ತಿಂಗಳ ಮಗುವಿದ್ದು,  ಅದರ ಭವಿಷ್ಯಕ್ಕೆ ಈ ಹಣವನ್ನು ವಿನಿಯೋಗಿಸುವೆ ಎಂದು ತೇಜಸ್ವಿನಿ ಹೇಳಿದ್ದರು. ಇದೀಗ ರಾಜ್ಯ ಸರ್ಕಾರ ಇಂದು 2 ಲಕ್ಷ ರೂ. ನೆವು ಘೊಷಿಸಿದೆ.

ತೇಜಸ್ವಿನಿ ಅವರಿಗೆ 2011ರಲ್ಲಿ ಅರ್ಜುನ ಪುರಸ್ಕಾರ ಸಂದಿದೆ. 2010 ಮತ್ತು  2014ರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತ ಕಬಡ್ಡಿ ತಂಡದಲ್ಲಿ ಇದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ