NEWSಕ್ರೀಡೆ

ಐಪಿಎಲ್ ಪಂದ್ಯಾಟ ಏ.9 ರಿಂದ ಮೇ 30ರ ವರೆಗೆ : ಆರ್‌ಸಿಬಿ ತಂಡ ಸೇರಿದ ಕೊಹ್ಲಿ, ಎಬಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಯಕ 14ನೇ ಆವೃತ್ತಿಯ ಐಪಿಎಲ್ ಟೂರ್ನಿಗಾಗಿ ತಮ್ಮ ತಂಡವನ್ನು ಚೆನ್ನೈನಲ್ಲಿ ಸೇರಿಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗಾಗಲೇ ಅಭ್ಯಾಸ ಆರಂಭಿಸಿದ್ದು, ಕೂಟದ ಮೊದಲ ಪಂದ್ಯದಲ್ಲೇ ಕಳೆದ ಬಾರಿಯ ಚಾಂಪಿಯನ್ ಮುಂಬೈ ತಂಡವನ್ನು ಏಪ್ರಿಲ್ 9 ರಂದು ಎದುರಿಸಲಿದೆ.

ಆರ್‌ಸಿಬಿ ತಂಡದಲ್ಲಿ ಘಟಾನುಘಟಿ ಅಟಗಾರರ ದಂಡೇ ಇದ್ದರೂ ಕೂಡ ಕಳೆದ 13 ಸೀಸನ್‍ಗಳಲ್ಲಿ ಕಪ್ ಗೆಲ್ಲಲು ವಿಫಲವಾಗಿದೆ. ಆದರೆ ಈ ಬಾರಿ ತಂಡಕ್ಕೆ ಟಿ20 ಕ್ರಿಕೆಟ್‍ನ ಸ್ಪೆಷಲಿಸ್ಟ್ ಬ್ಯಾಟ್ಸ್‌ಮ್ಯಾನ್ ಎನಿಸಿಕೊಂಡಿರುವ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಹರಾಜಿನಲ್ಲಿ ಖರೀದಿಸಿರುವ ಆರ್‌ಸಿಬಿ ಇವರ ಮೇಲೆ ಭಾರೀ ನಿರೀಕ್ಷೆ ಇರಿಸಿದೆ. ಈ ಮೂಲಕ ಈ ಬಾರಿ ಪ್ರಶಸ್ತಿಗೆ ಮುತ್ತಿಕ್ಕುವ ತವಕದಲ್ಲಿದೆ.

ಇನ್ನು ಕ್ಯಾಪ್ಟನ್ ಕೊಹ್ಲಿ ತಂಡಕ್ಕೆ ಬರುತ್ತಿದ್ದಂತೆ ಟ್ವೀಟ್ ಮಾಡುವ ಮೂಲಕ ಆರ್‌ಸಿಬಿ ತಂಡ ಕೊಹ್ಲಿಯನ್ನು ಚೆನ್ನೈನಲ್ಲಿ ಸ್ವಾಗತಿಸಿದೆ. ಕೊಹ್ಲಿಗಿಂತ ಮುಂಚಿತವಾಗಿ ಆರ್‌ಸಿಬಿಯ ಇನ್ನೋರ್ವ ಬ್ಯಾಟ್ಸ್‌ಮ್ಯಾನ್ ಮಿಸ್ಟರ್ 360 ಖ್ಯಾತಿಯ ಎಬಿಡಿ ವಿಲಿಯರ್ಸ್ ತಂಡ ಸೇರಿಕೊಂಡಿದ್ದರು. ಐಪಿಎಲ್‍ಗೆ ಇನ್ನು ಕೇವಲ 8 ದಿನಗಳು ಬಾಕಿ ಉಳಿಸಿದ್ದು ಎಲ್ಲಾ ತಂಡದ ಆಟಗಾರರು ತಂಡದೊಂದಿಗೆ ಬಯೋಬಬಲ್ ಅಡಿಯಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.

14ನೇ ಆವೃತ್ತಿಯ ಐಪಿಎಲ್ ಪಂದ್ಯಾವಳಿಗಳು ಏಪ್ರಿಲ್ 9 ರಿಂದ ಮೇ 30ರ ವರೆಗೆ ಬೆಂಗಳೂರು, ಚೆನ್ನೈ, ದೆಹಲಿ, ಅಹಮದಾಬಾದ್ ಸೇರಿ 6 ನಗರಗಳಲ್ಲಿ ನಡೆಯಲಿದೆ. ಇನ್ನು ಕ್ರಿಕೆಟ್‌ ಪ್ರೇಮಿಗಳು ಪಂದ್ಯಾ ಆರಂಭವಾಗುವುದುನ್ನು ಎದುರು ನೋಡುತ್ತಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ