NEWSದೇಶ-ವಿದೇಶಸಂಸ್ಕೃತಿ

ಸಂಗಾತಿ ಆಯ್ಕೆ ವ್ಯಕ್ತಿಯ ಮೂಲಭೂತ ಹಕ್ಕು: ಹೈಕೋರ್ಟ್‌ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ಲಖನೌ: ತಾವು ಇಷ್ಟಪಟ್ಟವನ್ನು ಆಯ್ಕೆ ಮಾಡಿಕೊಳ್ಳುವ ಮತ್ತು ಆ ವ್ಯಕ್ತಿಯ ಜೊತೆ ಜೀವಿಸುವ ಹಕ್ಕು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ
ಹಕ್ಕಿನ ಭಾಗವಾಗಿದೆ ಎಂದು ಉಲ್ಲೇಖಿಸಿರುವ ಅಲಹಾಬಾದ್‌ ಹೈಕೋರ್ಟ್‌, ಅಂತರ್‌ಧರ್ಮೀಯ ಜೋಡಿಯೊಂದರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ರದ್ದುಮಾಡಿದೆ.

‘ಲವ್‌ ಜಿಹಾದ್‌’ಗೆ ಕಡಿವಾಣ ಹಾಕಲು ಕಠಿಣ ಕಾಯ್ದೆಗಳನ್ನು ಕೆಲ ರಾಜ್ಯ ಸರ್ಕಾರಗಳು ತರಲು ನಿರ್ಧರಿಸಿರುವ ವೇಳೆಯೇ ಹೈಕೋರ್ಟ್‌ ನೀಡಿರುವ ಈ ತೀರ್ಪು ಸಂವಿಧಾನದ ವಿರುದ್ಧದ ನಡೆಗೆ ನೀಡಿದ ಉತ್ತರ ಎಂದೆ ಬಿಂಬಿತವಾಗಿದೆ. ವೈಯಕ್ತಿಕ ಸಂಬಂಧಗಳ ನಡುವೆ ಮಧ್ಯಪ್ರವೇಶಿಸುವುದು, ಇಬ್ಬರು ವ್ಯಕ್ತಿಗಳ ನಡುವಿನ ಆಯ್ಕೆಯ ಸ್ವಾತಂತ್ರ್ಯದ ಮೇಲೆ ಗಂಭೀರವಾದ ಅತಿಕ್ರಮಣ ಎಂದು ನ್ಯಾಯಮೂರ್ತಿಗಳಾದ ವಿವೇಕ್‌ ಅಗರವಾಲ್‌ ಹಾಗೂ ಪಂಕಜ್‌ ನಖ್ವಿ ಅವರಿದ್ದ ವಿಭಾಗೀಯ ಪೀಠವು ಹೇಳಿದೆ.

ಉತ್ತರ ಪ್ರದೇಶದ ಖುಷಿನಗರ್‌ ಜಿಲ್ಲೆಯ ಪ್ರಿಯಾಂಕಾ ಖಾರ್‌ವಾರ್‌ ಹಾಗೂ ಸಲಾಮತ್‌ ಅಲಿ ಅನ್ಸಾರಿ ಕಳೆದ ವರ್ಷ ಮದುವೆಯಾಗಿದ್ದರು. ಪ್ರಿಯಾಂಕಾ ನಂತರದಲ್ಲಿ ಇಸ್ಲಾಂಗೆ ಮತಾಂತರವಾಗಿದ್ದರು. ಮದುವೆಯ ನಂತರದಲ್ಲಿ ಪ್ರಿಯಾಂಕಾ ಅವರ ಪಾಲಕರು ಅನ್ಸಾರಿ ವಿರುದ್ಧ ಅಪಹರಣದ ದೂರು ನೀಡಿದ್ದರು. ಈ ಎಫ್‌ಐಆರ್‌ ರದ್ದುಗೊಳಿಸಲು ಕೋರಿ ದಂಪತಿ ಅರ್ಜಿ ಸಲ್ಲಿಸಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್