NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಮುಷ್ಕರಕ್ಕೆ ನಟ ಯಶ್‌ ಬೆಂಬಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಆರನೇ ವೇತನ ಆಯೋಗದಡಿ ನಮಗೂ ವೇತನ ಕೊಡುವ ಮೂಲಕ ವೇತನ ತಾರತಮ್ಯ ನೀತಿ ಕೈ ಬಿಡಬೇಕು ಎಂದು ಕಳೆದ ಏ.7ರಿಂದ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 9ನೇ ದಿನಕ್ಕೆ ಕಾಲಿಟ್ಟಿದ್ದು, ಈ ಮುಷ್ಕರಕ್ಕೆ ರಾಕಿಂಗ್‌ಸ್ಟಾರ್‌ ಯಶ್‌ ಸಾಥ್‌ ನೀಡಿದ್ದಾರೆ.

ಚಾಲಕ, ನಿರ್ವಾಹಕರ ಸಂಕಷ್ಟದ ಅರಿವು ನಿಮಗಿದೆ. ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ನಮಗೆ ತಮ್ಮ ಬೆಂಬಲ ಸೂಚಿಸಬೇಕು ಎಂದು ಯಶ್ ಅವರಿಗೆ ಪತ್ರ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಮನವಿ ನೌಕರರು ಮಾಡಿದ್ದರು.

ನೌಕರರ ಮನವಿಗೆ ಸ್ಪಂದಿಸಿರುವ ಯಶ್‌ ಅವರು ನಾನು ಸ್ವತಃ ಬಸ್ ಚಾಲಕನ ಪುತ್ರನಾಗಿ ನನಗೆ ನಿಮ್ಮ ಕಷ್ಟ ಗೊತ್ತಿದೆ. ನೀವು ಕೆಲಸದ ಮೇಲೆ ಇಟ್ಟಿರುವ ನಂಬಿಕೆ ಕಾಳಜಿಯನ್ನು ನಾನು ಹತ್ತಿರದಿಂದಲೇ ಕಂಡಿದ್ದೇನೆ. ಹೀಗಾಗಿ ನಿಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಯ ನಿಟ್ಟಿನಲ್ಲಿ ನಾನು ನಿಮ್ಮ ಜತೆ ಇದ್ದೇನೆ ಎಂದು ನೌಕರರ ಕೂಟಕ್ಕೆ ಧೈರ್ಯ ತುಂಬಿದ್ದಾರೆ.

ಜತೆಗೆ ನಿಮ್ಮ ಬೇಡಿಕೆ ಕುರಿತು ನಾನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೂ ಸುರ್ದೀಘ ಚರ್ಚೆ ಮಾಡಿದ್ದು ಅವರು ನಿಮ್ಮ ವೇತನ ಬೇಡಿಕೆ ಈಡೇರುಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ