NEWSನಮ್ಮರಾಜ್ಯರಾಜಕೀಯ

ಸಚಿವ ಈಶ್ವರಪ್ಪ ರಾಜೀನಾಮೆಗೆ ಬಿಎಸ್‍ವೈ ಆಪ್ತ ಶಾಸಕರ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಮಧ್ಯೆ ನಡೆಯುತ್ತಿದ್ದ ಶೀತಲ ಸಮರ ಈಗ ಸ್ಫೋಟಗೊಂಡಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಬರೆದಿರುವ ಪತ್ರ ಬೆಳಕಿಗೆ ಬಂದ ಬೆನ್ನಲ್ಲೇ ಇಲ್ಲಿಯವರೆಗೆ ತೆರೆ ಹಿಂದೆ ನಡೆಯುತ್ತಿದ್ದ ಕಿತ್ತಾಟ ಈಗ ಬಹಿರಂಗವಾಗಿದೆ.

ನಮ್ಮ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ಬಹಿರವಾಗಿಯೇ ಸಚಿವ ಈಶ್ವರಪ್ಪ ಪತ್ರ ಬರೆದ ಬೆನ್ನಲ್ಲೇ ಸಚಿವರ ರಾಜೀನಾಮೆಗೆ ಬಿಎಸ್‍ವೈ ಆಪ್ತ ಶಾಸಕರು ಆಗ್ರಹಿಸಿದ್ದಾರೆ.

ಸಿಎಂ ಆಪ್ತ ಶಾಸಕರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಅರುಣ್ ಕುಮಾರ್ ಪೂಜಾರ್, ಮಹದೇವಪ್ಪ ಯಾದವಾಡ, ಮಹೇಶ್ ಕುಮಟಹಳ್ಳಿ, ಪರಣ್ಣ ಮುನವಳ್ಳಿ, ದಿನಕರ್ ಶೆಟ್ಟಿ ಇಂದು ಬೆಳಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಮಾತುಕತೆ ನಡೆದಿದ್ದಾರೆ. ಈ ವೇಳೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸುವುದು ಎಷ್ಟು ಸರಿ ಎಂದು ಕೇಳಿದ್ದಾರೆ. ಅಷ್ಟೇ ಅಲ್ಲದೇ ಕೂಡಲೇ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಸಹಿ ಸಂಗ್ರಹ
ಕೆಲ ದಿನಗಳ ಹಿಂದೆ ಸಿಎಂ ಸಹಿ ಹಾಕಿದ್ರೂ ಈಶ್ವರಪ್ಪ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ರೇಣುಕಾಚಾರ್ಯ ದೂರು ನೀಡಿದ್ದರು. ರೇಣುಕಾಚಾರ್ಯ ನೇತೃತ್ವದ ದೂರಿನ ಮೇರೆಗೆ ಯಡಿಯೂರಪ್ಪ ಮಾರ್ಚ್ 18 ರಂದು ಸಭೆ ಕರೆದಿದ್ದರು. ಈ ಸಭೆಯ ಬಳಿಕ ಒಟ್ಟು 48 ಜನರ ಸಹಿ ಸಂಗ್ರಹವಾಗಿದ್ದು, ಇದೇ ಸಹಿ ಸಂಗ್ರಹವನ್ನು ಹೈಕಮಾಂಡ್‍ಗೆ ಕಳುಹಿಸಲು ಯಡಿಯೂರಪ್ಪ ಬಣ ಮುಂದಾಗಿತ್ತು. ಈ ಸಭೆಯ ಬಳಿಕ ಇಬ್ಬರ ನಡುವೆ ನಡೆಯುತ್ತಿದ್ದ ಶೀತಲ ಸಮರ ಈಗ ಸ್ಫೋಟಗೊಂಡಿದೆ.

ಸಿಎಂ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹಿರಿಯರಾಗಿದ್ದು ಅರ್ಥ ಮಾಡಿಕೊಳ್ಳಬೇಕು. ರಾಜ್ಯಪಾಲರಿಗೆ ದೂರು ಕೊಡುವುದು ಎಷ್ಟರಮಟ್ಟಿಗೆ ಸರಿ? ಸರ್ಕಾರದ ವಿರುದ್ಧ ಹೇಳಿಕೆ ಕೊಡುವುದು ಸರಿ ಅಲ್ಲ ಎಂದು ಹೇಳಿದರು.

ಜೆ.ಪಿ. ನಡ್ಡಾ, ಅಮಿತ್ ಶಾ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ದಾಖಲೆಯನ್ನು ಬಿಡುಗಡೆ ಮಾಡುತ್ತೇವೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಬೇಕಾಬಿಟ್ಟಿಯಾಗಿ ಹಣವನ್ನು ಈ ಹಿಂದೆ ಬಿಡುಗಡೆ ಮಾಡಿದ್ದು ಇದನ್ನು ಪ್ರಶ್ನೆ ಮಾಡುತ್ತೇವೆ. ಮರಿಸ್ವಾಮಿ ಮನೆಗೆ ಹಣ ಬಿಡುಗಡೆ ಮಾಡಿಲ್ಲ. ಬೆಂಗಳೂರು ಜಿಲ್ಲಾ ಪಂಚಾಯತ್‍ಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಈಶ್ವರಪ್ಪ ಆರೋಪಕ್ಕೆ ತಿರುಗೇಟು ನೀಡಿ ಸಿಎಂ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಇಂದು (ಬುಧವಾರ) ಮಧ್ಯಾಹ್ನ ರಾಜ್ಯಪಾಲರಿಗೆ ದೂರು
ಲಿಖಿತ ರೂಪದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‍ಸಿಂಗ್, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಈಶ್ವರಪ್ಪ 2 ಪುಟಗಳ ಪತ್ರ ಬರೆದಿದ್ದಾರೆ. ಜೊತೆಗೆ ಬುಧವಾರ ಮಧ್ಯಾಹ್ನ ರಾಜ್ಯಪಾಲರನ್ನೂ ಭೇಟಿಯಾಗಿ ಈಶ್ವರಪ್ಪ ದೂರು ಕೊಟ್ಟಿದ್ದಾರೆ.

ಆರ್ಥಿಕ ಇಲಾಖೆ ಮುಖ್ಯಮಂತ್ರಿಗಳ ಬಳಿಯೇ ಇದೆ. ಆದರೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಹತ್ವದ ಯೋಜನೆಗಳಿಗೆ ಒಪ್ಪಿಗೆ ನೀಡುತ್ತಿಲ್ಲ. ಬದಲಿಗೆ ನಮ್ಮ ಗಮನಕ್ಕೆ ತರದೇ ಬೇರೆ ಶಾಸಕರಿಗೆ ಅನುದಾನ ರಿಲೀಸ್ ಮಾಡಿದ್ದಾರೆ ಎಂದು ದೂರಿದ್ದಾರೆ.

ಆರೋಪಗಳು ಏನು?
1. ಗ್ರಾಮೀಣ ಸುಮಾರ್ಗ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಕೊಟ್ಟಿಲ್ಲ.
2. 32 ಬಿಜೆಪಿ ಶಾಸಕರಿಗೆ ತಲಾ 20ರಿಂದ 23 ಕೋಟಿ, 42 ಬಿಜೆಪಿ ಶಾಸಕರಿಗೆ ತಲಾ 10 ಕೋಟಿ ರೂ. ಬಿಡುಗಡೆಗೆ ಸೂಚನೆ.
3. ಕಾಂಗ್ರೆಸ್‍ನ 30 ಶಾಸಕರಿಗೆ 5 ಕೋಟಿ ರೂ. ಜೆಡಿಎಸ್‍ನ 18 ಶಾಸಕರಿಗೆ ತಲಾ 5 ಕೋಟಿ ರೂ. ಬಿಡುಗಡೆಗೆ ಆದೇಶ.
4: ಬಿಎಸ್‍ವೈ ಬೀಗರೂ ಆಗಿರುವ ಬೆಂಗಳೂರು ನಗರ ಜಿ.ಪಂ ಅಧ್ಯಕ್ಷ ಮರಿಸ್ವಾಮಿ ಪ್ರತಿನಿಧಿಸುವ ದಾಸರಹಳ್ಳಿ ಜಿ.ಪಂ.ಗೆ 65 ಕೋಟಿ ರೂ. ಅನುದಾನ.
5. ಜಿ.ಪಂ.ಗಳಿಗೆ 2019-20ರಲ್ಲಿ 1 ಅಥವಾ 2 ಕೋಟಿ ಅನುದಾನ ಬಿಡುಗಡೆಗೆಯಾಗಿತ್ತು. ಆದರೆ ಈಗ ದಾಸರಹಳ್ಳಿ ಜಿ.ಪಂ.ಗೆ ಇಷ್ಟೊಂದು ದೊಡ್ಡ ಅನುದಾನ ಬಿಡುಗಡೆಯಾಗಿದೆ.
6. ತಮ್ಮ ಇಲಾಖೆಗೆ ನೀಡಿದ ಅನುದಾನದಲ್ಲಿ, ತಮ್ಮ ಗಮನಕ್ಕೆ ಬಾರದೇ ಅನುದಾನ ಹಂಚಿಕೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ