ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ತಾಲೂಕಿನ ಬೆಕ್ಕರೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಹಾಗೂ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿಯ ಅಂದಾಜು 40 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.
ನಾನು ಚುನಾವಣಾ ಪೂರ್ವದಲ್ಲಿ ಜನತೆಗೆ ಕೊಟ್ಟ ಭರವಸೆಯನ್ನು ಹಂತಹಂತವಾಗಿ ಈಡೇರಿಸುವ ಮೂಲಕ ಜನತೆಗೆ ಸ್ಪಂದಿಸುವ ಕಲಸ ಮಾಡುತ್ತಿದ್ದೇನೆ. ಕೊರೊನಾ ಸಂಕಷ್ಟದ ಸಮಯದಲ್ಲೂ ಗ್ರಾಮದ ಅಭಿವೃದ್ಧಿಗೆ ಅಗತ್ಯ ಅನುದಾನ ಮಂಜೂರು ಮಾಡಿದ್ದು ಈಗಾಗಲೇ ಗ್ರಾಮದ ಸರ್ಕಾರಿ ಶಾಲೆಗೆ ನೂತನ 3 ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಶಾಸಕ ಮಹದೇವ್ ಇದೇ ವೇಳೆ ತಿಳಿಸಿದರು.
ತಾಲೂಕಿನಲ್ಲಿ ಅನೇಕ ಗ್ರಾಮ ಪರಿಮಿತಿ ರಸ್ತೆಗಳ ಅಭಿವೃದ್ಧಿ ಕಾರ್ಯಗಳು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸುವ ಮೂಲಕ ಜನತೆಗೆ ಅಗತ್ಯ ಸಹಕಾರ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನ ತರುವ ಮೂಲಕ ಗ್ರಾಮದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯದ ಕೊರತೆ ನೀಗಿಸಲಾಗುವುದು ಎಂದರು.
ಇದೇ ವೇಳೆ ಹಳಿಯೂರು, ಹೊನ್ನಾಪುರ, ದೊಡ್ಡಕಮರವಳ್ಳಿ ಗ್ರಾಮಗಳ ಗ್ರಾಮ ಪರಿಮಿತಿ ರಸ್ತೆ ರೂ.75 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ತಹಸೀಲ್ದಾರ್ ಕೆ.ಚಂದ್ರಮೌಳಿ, ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್, ಎಡಿಎಲ್ ಆರ್ ಚಿಕ್ಕಣ್ಣ, ಆರ್ ಡಬ್ಲ್ಯುಎಸ್ ಎಇಇ ಶಿವಕುಮಾರ್, ತಾ.ಪಂ.ಸಹಾಯಕ ನಿರ್ದೇಶಕ ರಘುನಾಥ್, ಚೆಸ್ಕಾಂ ಎಇಇ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ರೇಷ್ಮೆ ಇಲಾಖೆ ಅಧಿಕಾರಿ ಸಿದ್ಧರಾಜು, ಕಂದಾಯ ಅಧಿಕಾರಿ ಆನಂದ್, ಗ್ರಾಮಲೆಕ್ಕಿಗರಾದ ವೀಕ್ಷಿತಾ.
ಪಿಡಿಒ ನಾರಾಯಣ್, ಗ್ರಾ.ಪಂ ಸದಸ್ಯರಾದ ರುಕ್ಕಣ್ಣ, ಜಗದೀಶ್, ಜ್ಯೋತಿ ರವಿಕುಮಾರ್, ಸಿಆರ್ಪಿ ಚೇತನ್, ಇಸಿಒ ಸತೀಶ್, ಶಿಕ್ಷಕರಾದ ವಿಶುಕುಮಾರ್, ಯೋಗೀಶ್, ಪುಷ್ಪಾವತಿ, ಮುಖಂಡರಾದ ನಂಜಪ್ಪ, ಚಂದ್ರಶೇಖರಾಚಾರ್, ಷಣ್ಮುಖಾರಾಧ್ಯ, ಹೊನ್ನಪ್ಪ, ಗಣೇಶ್, ಸತ್ಯ, ಬಿ.ಬಿ ರವಿ, ರುಕ್ಮಾಂಗದಾಚಾರ್, ಬಿ.ವಿ ಗಿರೀಶ್, ಜಯಣ್ಣ, ಚಂದ್ರು, ಜಗದೀಶ್, ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಇದ್ದರು.