- ವಿಜಯಪಥ ಸಮಗ್ರ ಸುದ್ದಿ
ದೊಡ್ಡಬಳ್ಳಾಪುರ: ಕರ್ನಾಟಕ ತೋಟಗಾರಿಕಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು ಉತ್ಪಾದನಾ ಕ್ಷೇತ್ರದಲ್ಲಿ ಆಧುನಿಕ ತಾಂತ್ರಿಕತೆ ನಿವಾರಣೆ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕ್ಷೇತ್ರದಲ್ಲಿ ಸುಧಾರಣೆಗಳ ಅಗತ್ಯವಿದೆ ಎಂದು ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಸಂಘದ ಅಧ್ಯಕ್ಷ ರಾಜ್ ಕುಮಾರ್ ಹೇಳಿದರು.
ತಾಲೂಕಿನ ತೂಬಗೆರೆಯ ಸಂಘದ ಆವರಣದಲ್ಲಿ ಇಂದು ನಡೆದ ತೋಟಗಾರಿಕೆ ರೈತ ಉತ್ಪಾದಕರ ಕಂಪನಿಯ ಐದನೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ರೈತರು ಬೆಳೆದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೇ ತೆರಿಗೆ ಉಳಿತಾಯ ಮಾಡುವ ನಿಟ್ಟಿನಲ್ಲಿ ಕಂಪನಿ ಆರಂಭವಾಗಿದೆ. ಗುಣಮಟ್ಟದ ಬಿತ್ತನೆ ಬೀಜ ರಸಗೊಬ್ಬರಗಳನ್ನು ಕಡಿಮೆ ಬೆಲೆಯಲ್ಲಿ ರೈತರಿಗೆ ಒದಗಿಸುವುದು ಅಗತ್ಯವಾದ ಟ್ರ್ಯಾಕ್ಟರ್ ಪವರ್ ಟಿಲ್ಲರ್, ಕಳೆ ತೆಗೆಯುವ ಯಂತ್ರ ಇನ್ನು ಮುಂತಾದ ಯಂತ್ರೋಪಕರಣಗಳನ್ನು ಕಡಿಮೆ ಬೆಲೆಯಲ್ಲಿ ರೈತರಿಗೆ ಒದಗಿಸಿ ಕೊಳ್ಳುವಂತೆ ಮನವಿ ಮಾಡಿದರು.
ದೊಡ್ಡಬಳ್ಳಾಪುರ ತೋಟಗಾರಿಕಾ ಸಹಾಯಕ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಸದಸ್ಯರು ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸದೆ ತಿಂಗಳಿಗೆ ಒಮ್ಮೆಯಾದರೂ ಕಂಪನಿಯ ಕಚೇರಿಯಲ್ಲಿ ಬಂದು ಮಾಹಿತಿ ತಿಳಿದುಕೊಂಡು ಕಂಪನಿಯ ಪ್ರಯೋಜನಗಳನ್ನು ಪಡೆಯಬೇಕು. ರೈತರಿಗೆ ಮಾಹಿತಿ ನೀಡಿದಾಗ ಸಮಸ್ತ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.
ಸಭೆಯಲ್ಲಿ ಹಾಡೋನಹಳ್ಳಿ ಕೆವಿಕೆ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ ಗೌಡ, ತೋಟಗಾರಿಕಾ ಸಂಘದ ಉಪಾಧ್ಯಕ್ಷೆ ಬಿ.ಕೆ. ಸುಜಾತ. ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಂಗರಾಜು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಲೀಲಾವತಿ ಹಾಗೂ ಸುತ್ತಮುತ್ತಲಿನ ರೈತರು ಭಾಗವಹಿಸಿದ್ದರು.