NEWSನಮ್ಮರಾಜ್ಯರಾಜಕೀಯ

ತೇಜಸ್ವಿ ಸೂರ್ಯನ ಆರ್ಭಟ- ಉತ್ತರನ ಪೌರುಷ ಒಲೆ ಮುಂದೆ ಎಂಬಂತೆ: ಎಎಪಿಯ ನಾಗಣ್ಣ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ನೇರವಾಗಿ ಭಾಗಿಯಾಗಿರುವ ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ನಗರ ಉಪಾಧ್ಯಕ್ಷ ಬಿ. ಟಿ. ನಾಗಣ್ಣ ಆಗ್ರಹಿಸಿದ್ದಾರೆ.

ಪಕ್ಷದ ಮಾಧ್ಯಮ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿವಸಗಳ ಹಿಂದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕೊರೊನಾ ರೋಗಿಗಳ ಬೆಡ್ ಬ್ಲಾಕಿಂಗ್ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದೇನೆಂದು ಪರಾಕ್ರಮ ಮೆರೆದಿದ್ದರು.

ಆದರೆ ಈ ಅಕ್ರಮ ದಂಧೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದ ಅವರು, ಇಂಥ ದಂಧೆಯಲ್ಲಿ ಪಾಲ್ಗೊಂಡಿರುವ ಕೊಲೆಪಾತಕರನ್ನು ರಕ್ಷಿಸುವ ಸಲುವಾಗಿ ಉತ್ತರನ ಪೌರುಷ ಒಲೆ ಮುಂದೆ ಎಂಬಂತೆ ತೇಜಸ್ವಿ ಸೂರ್ಯ ನಡೆದುಕೊಂಡು ಈಗ ಕಾಣೆಯಾಗಿರುವುದು ಏತಕ್ಕೆ ಎಂದು ಕಿಡಿಕಾರಿದರು.

ಇಂದು ಮಾಧ್ಯಮಗಳಲ್ಲಿ ಶಾಸಕ ಸತೀಶ್ ರೆಡ್ಡಿ ನೇರ ಪಾತ್ರವಿರುವುದು ಬಯಲಾಗಿದೆ. ಈ ಬಗ್ಗೆ ಸಂಸದರು ಜನತೆಗೆ ಏನೆಂದು ಉತ್ತರ ಹೇಳುತ್ತಾರೆ ? ಶಾಸಕ ಸತೀಶ್ ರೆಡ್ಡಿ ಹಾಗೂ ಇನ್ನಿತರರ ಕೊಲೆ ಪಾತಕಿಗಳನ್ನು ಪೊಲೀಸ್ ಇಲಾಖೆ ಈ ಕೂಡಲೇ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ನಾಗಣ್ಣ ಒತ್ತಾಯಿಸಿದರು .

ಬೆಂಗಳೂರಿನ ಎಲ್ಲಾ ವಲಯಗಳ ಸಹಾಯವಾಣಿ ಕೇಂದ್ರಗಳಲ್ಲಿ ಬಿಜೆಪಿಯ ಪ್ರಮುಖ ಮಂತ್ರಿಗಳು ಹಾಗೂ ಶಾಸಕರು ನೇರ ಕೈವಾಡವಿದ್ದು ಎಲ್ಲರೂ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಪಾಲ್ಗೊಂಡು ಇದುವರೆವಿಗೂ ಬೆಡ್ ಸಿಗದೆ ಆಗಿರುವ ಸಾವಿರಾರು ಅಮಾಯಕ ರೋಗಿಗಳ ಸಾವಿಗೆ ನೇರ ಹೊಣೆಗಾರರಾಗಿದ್ದಾರೆಂದು ಆರೋಪಿಸಿದರು.

ಇಂತಹ ದೊಡ್ಡ ದುಷ್ಕೃತ್ಯಗಳಲ್ಲಿ ಪ್ರಭಾವಿಗಳ ಪಾತ್ರ ಇದ್ದೇ ಇರುತ್ತದೆ ಎಂಬುದು ಮೊದಲಿನಿಂದಲೂ ಆಮ್ ಆದ್ಮಿ ಪಕ್ಷದ ಸ್ಪಷ್ಟ ಅಭಿಪ್ರಾಯವಾಗಿತ್ತು. ಪ್ರಭಾವಿಗಳನ್ನು ರಕ್ಷಿಸಲು ಹೋಗಿ ಸಂಸದರು ಸಣ್ಣ ಸಣ್ಣ ಅಧಿಕಾರಿಗಳನ್ನು ಹಾಗೂ ಗುತ್ತಿಗೆ ನೌಕರರನ್ನು ಬಂಧಿಸಿ ಪ್ರಕರಣವನ್ನು ದಿಕ್ಕು ತಪ್ಪಿಸುವ ಹುನ್ನಾರ ಕೈಗೊಂಡಿದ್ದರು. ಆದರೆ ಈಗ ಪ್ರಭಾವಿಗಳ ಬಣ್ಣ ಬಟಾಬಯಲಾಗಿದೆ ಎಂದರು.

ಈ ಸಂಬಂಧ ಶಾಸಕ ಸತೀಶ್ ರೆಡ್ಡಿ ವಿರುದ್ಧ ಈಗಾಗಲೇ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ದೂರನ್ನು ಸಹ ಸಲ್ಲಿಸಲಾಗಿದೆ. ಕೂಡಲೇ ಸರ್ಕಾರವು ಪ್ರಕರಣದ ತನಿಖೆಯ ಹಾದಿಯನ್ನು ತಪ್ಪಿಸದೆ ತನ್ನದೇ ಪಕ್ಷದ ಪ್ರಭಾವಿಗಳು ಶಾಸಕರು ಹಾಗೂ ಮಂತ್ರಿಗಳ ವಿರುದ್ಧ ತನಿಖೆ ಕೈಗೊಳ್ಳಲು ಹಾಲಿ ಉಚ್ಚನ್ಯಾಯಾಲಯದ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ನಾಗಣ್ಣ ಆಗ್ರಹಿಸಿದರು.

ಪಕ್ಷದ ಮಹಿಳಾ ಮುಖಂಡರಾದ ಉಷಾ ಮೋಹನ್ ಭಾಗವಹಿಸಿದ್ದರು.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!