NEWSನಮ್ಮರಾಜ್ಯರಾಜಕೀಯ

ಮೈಸೂರು ಡಿಸಿಯದ್ದು ತಮ್ಮದೇ ನಿರ್ಧಾರ ಸರಿ ಎನ್ನುವ ಮನೋಭಾವ: ಮಾಜಿ ಸಚಿವ ಎ. ಮಂಜು ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾಸನ್‌: ದನ ಕಾಯುವವನೂ ಐಎಎಸ್‌ ಪಾಸ್‌ ಮಾಡಿದ್ದಾನೆ ಎಂದರೆ ಖುಷಿ ಪಡುವ ವಿಷಯ. ಆದರೆ, ಅಧಿಕಾರ ಸಿಕ್ಕ ನಂತರ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹು ಮುಖ್ಯ ಎಂದು ಮಾಜಿ ಸಚಿವ ಎ. ಮಂಜು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಐಎಎಸ್‌ ಅಧಿಕಾರಿಯೂ ಮನುಷ್ಯರೆ ಆಗಿರುತ್ತಾರೆ. ಐಎಎಸ್‌ ಅಧಿಕಾರಿಗಳು ಮಾಡುವ ತಪ್ಪನ್ನು ತಿದ್ದಲೇ ಜನ ಪ್ರತಿನಿಧಿಗಳಿದ್ದಾರೆ. ಆದರೆ, ರೋಹಿಣಿ ಸಿಂಧೂರಿ ಅವರು ತಮ್ಮದೇ ನಿರ್ಧಾರ ಸರಿ ಎನ್ನುವ ಮನೋಭಾವನೆ ಹೊಂದಿದ್ದಾರೆ. ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧರಿಲ್ಲ ಎಂದು ಆರೋಪಿಸಿದರು.

ಮೈಸೂರು ನಗರಕ್ಕೆ ಏನು ಬೇಕು ಎಂಬುದನ್ನು ಆ ಕಾಲದಲ್ಲೇ ಮೈಸೂರು ಅರಸರು ಆಲೋಚಿಸಿ ನಗರವನ್ನು ಕಟ್ಟಿದ್ದಾರೆ. ಪಾರಂಪರಿಕ ಕಟ್ಟಡಗಳ ರಕ್ಷಣಾ ಸಮಿತಿಗೆ ಜಿಲ್ಲಾಧಿಕಾರಿಗಳು ಮುಖ್ಯಸ್ಥರಾಗಿರುತ್ತಾರೆ. ಪಾರಂಪರಿಕ ಕಟ್ಟಡಗಳನ್ನು ರಕ್ಷಿಸಬೇಕಾದ ರೋಹಿಣಿ ಸಿಂಧೂರಿ ಅವರೇ ಈ ರೀತಿ ಪಾರಂಪರಿಕ ಕಟ್ಟಡಗಳನ್ನು ಹಾಳುಮಾಡುತ್ತಿರುವುದು ಸರಿಯಲ್ಲ.

ಅವರು ಅಧಿಕಾರವನ್ನು ಮಿಸ್‌ ಯೂಸ್‌ ಮಾಡಿಕೊಳ್ಳುತ್ತಿಲ್ಲ. ಬದಲಾಗಿ ಎನ್‌ಕ್ಯಾಶ್‌ ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳು ಆನ್‌ಲೈನ್‌ ಶಿಕ್ಷಣಕ್ಕೆ ಒಗ್ಗಬೇಕು ಎನ್ನುವ ಡಿಸಿ ಅವರು ತಮ್ಮ ಮಕ್ಕಳಿಗಾಗಿ ಶಿಕ್ಷಕರನ್ನೇ ಮನೆಗೆ ಕರೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿ ಸ್ವಿಮ್ಮಿಂಗ್‌ ಪೂಲ್‌ ಕಟ್ಟಿಸಲು ಸಭೆಯಲ್ಲಿ ಚರ್ಚಿಸಿದ್ದಾರೆಯೇ? ಎಂದೂ ಪ್ರಶ್ನಿಸಿದರು. ಆಂಧ್ರ ಸಿಎಂ ಜಗನ್‌ ಅವರು ಸಿಂಧೂರಿ ಅವರ ಪರ ಲಾಬಿ ಮಾಡುತ್ತಿದ್ದಾರೆ ಎಂಬುನ್ನು ನಾವು ಒಪ್ಪುವುದಿಲ್ಲ. ಯಾರೇ ಲಾಬಿ ಮಾಡಿದರೂ ಇಲ್ಲಿ ಕೇಳುವವರಿಲ್ಲ. ಅಧಿಕಾರಿ ಯಾವುದೇ ರಾಜ್ಯದವರಾಗಲಿ ಕರ್ನಾಟಕಕ್ಕೆ ಪೋಸ್ಟ್‌ ಆದ ನಂತರ ರಾಜ್ಯದ ಶ್ರೇಯೋಭಿವೃದ್ಧಿಗಾಗಿ ದುಡಿಯಬೇಕು ಎಂದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು