ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಮ್ಮ ಮನೆಯ ಹೆಣ್ಣು ಮಗಳನ್ನು ಮುಂದಿಟ್ಟುಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿಯದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ತಂದೆ ಡಿಕೆಶಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ವಿಶೇಷ ತನಿಖಾ ತಂಡ (ಎಸ್ಐಟಿ)ದ ಮುಂದೆ ನಾಲ್ಕು ಗಂಟೆಗಳು ತಮ್ಮ ಹೇಳಿಕೆ ದಾಖಲಿಸಿದ ಬಳಿಕ ಹೊರ ಬಂದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಡಿಕೆಶಿ ನಮ್ಮ ಮಗಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಇನ್ನು ಸಂತ್ರಸ್ತ ಯುವತಿಯ ಸಹೋದರ ಮಾತನಾಡಿ, ನಮ್ಮ ಅಕ್ಕನನ್ನು ಮುಂದಿಟ್ಟುಕೊಂಡು ಶಿವಕುಮಾರ್ ಹೀನಾ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಬಳಿ ಇದ್ದ ಸಾಕ್ಷ್ಯಗಳನ್ನು ನಾವು ಈಗ ಎಸ್ಐಟಿ ಅಧಿಕಾರಿಗಳಿಗೆ ನೀಡಿದ್ದೇವೆ. ನನ್ನ ಅಕ್ಕನನ್ನು ಗೋವಾಕ್ಕೆ ಕಳುಹಿಸಿದ್ದಾರೆ. ಯಾವುದೇ ರೀತಿಯ ಬೆದರಿಕೆ ಇಲ್ಲ. ಪೊಲೀಸರು ಭದ್ರತೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಇಂಥ ರಾಜಕೀಯ ಮಾಡಬಾರದು ನಮ್ಮ ಅಕ್ಕ ವಾಪಸ್ ಮನೆಗೆ ಬರಬೇಕು. ಆಕೆಯೊಂದಿಗೆ ನಾನು ಫೆಬ್ರವರಿ 5ರಂದು ಮಾತನಾಡಿದ್ದು, ಇಲ್ಲಿಯ ವರೆಗೆ ಮಾತನಾಡಲು ಸಾಧ್ಯವಾಗಿಲ್ಲ. ಇನ್ನು ನರೇಶ್ ಗೌಡ ನೀಡಿರುವ ಹೇಳಿಕೆ ಸುಳ್ಳು ಅದರಲ್ಲಿ ಯಾವುದೇ ಸತ್ಯ ಇಲ್ಲ ಎಂದು ಯುವತಿಯ ಸಹೋದರ ತಿಳಿಸಿದ್ದಾನೆ.