NEWSನಮ್ಮರಾಜ್ಯರಾಜಕೀಯ

ಬಿಜೆಪಿ ಸರ್ಕಾರ ಕೊಟ್ಟದ್ದು ರಾಗಿಯಲ್ಲಿ ಕಲ್ಲಲ್ಲ, ಕಲ್ಲಲ್ಲಿ ರಾಗಿ!!

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಪಡಿತರ ವಿತರಣೆಯಲ್ಲಿ ಆಗುತ್ತಿರುವ ಕಲಬೆರೆಕೆ ರಾಗಿಯ ಕುರಿತಾಗಿ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರು ಬೆಂಗಳೂರಿನ ನ್ಯಾಯಬೆಲೆ ಅಂಗಡಿಯೊಂದರ ಮುಂದೆ ಭಾನುವಾರ ರಿಯಾಲಿಟಿ ಚೆಕ್ ಮಾಡುವ ಮೂಲಕ ಅಕ್ರಮವನ್ನು ಬಯಲಿಗೆಳೆದಿದ್ದಾರೆ.

ನ್ಯಾಯಬೆಲೆ ಅಂಗಡಿಗಳ ಮೂಲಕ ರಾಜ್ಯದ ಬಡವರಿಗೆ ವಿತರಿಸುತ್ತಿರುವ ಪಡಿತರದಲ್ಲಿ ರಾಗಿಯಲ್ಲಿ ಕಲ್ಲಲ್ಲ, ಕಲ್ಲಲ್ಲಿ ರಾಗಿ ಇರುವುದರ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಮುಗ್ಗಲು ರಾಗಿಯಿಂದ ನಾವು ಆಯ್ಕೆ ಮಾಡಿ ಕಳಿಸಿರುವ ಜನಪ್ರತಿನಿಧಿಗಳಿಗೆ ಮುದ್ದೆ ಮಾಡಿ ಉಣಬಡಿಸುವ ಕಾರ್ಯಕ್ರಮವನ್ನು ಶೀಘ್ರದಲ್ಲೇ ಹಮ್ಮಿಕೊಳ್ಳುತ್ತೇವೆ. ಅವರು ಈ ರಾಗಿಯಿಂದ ಮಾಡಿದ ಮುದ್ದೆ ತಿನ್ನಲಿ ಎಂದು ಕಳಪೆ ರಾಗಿ ವಿತರಣೆ ಮಾಡುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಪಡಿತರದಾರರು ಪೃಥ್ವಿ ರೆಡ್ಡಿ ಅವರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದು, ಈ ರಾಗಿ ದನಗಳು ತಿನ್ನುವುದಕ್ಕೂ ಆಗುವುದಿಲ್ಲ ಇನ್ನು ನಾವು ಹೇಗೆ ತಿನ್ನುವುದು. ಮುಗ್ಗಲು ರಾಗಿ, ಜತೆಗೆ ಕಲಲ್ಲುಗಳೇ ಹೆಚ್ಚಾಗಿದೆ ತೂಕ ಬರಲಿ ಎಂದು ರಾಗಿಯಲ್ಲಿ ಕಲ್ಲನ್ನು ಬೆರೆಸಿ ಕೊಡುತ್ತಿದ್ದಾರೆ. ಬಡವರ ಅನ್ನ ಕಸಿದು ಯಾರ ಹೊಟ್ಟೆ ತುಂಬಿಸಲು ಹೊರಟಿದ್ದಾರೆ ಎಂದು ಸರ್ಕಾರಕ್ಕೆ ಮತ್ತು ಜನ ಪ್ರತಿನಿಧಿಗಳಿ ಹಿಡಿ ಶಾಪ ಹಾಕಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ