NEWSನಮ್ಮರಾಜ್ಯರಾಜಕೀಯ

ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸಿದೆ: ಸಾರಿಗೆ ಸಚಿವ ಲಕ್ಷ್ಮಣ ಸವದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೀದರ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸುತ್ತಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ತವ್ಯಕ್ಕೆ ಹಾಜರಾಗಲು ಹೆಚ್ಚಿನ ಸಂಖ್ಯೆಯ ನೌಕರರು ಮುಂದೆ ಬರುತ್ತಿದ್ದು, ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಗುರುವಾರ ಬೆಳಗ್ಗೆ ಹೆಚ್ಚಿನ ನೌಕರರು ಕೆಲಸಕ್ಕೆ ಮರಳಿದ್ದಾರೆ. ಇಂದು ಬೆಳಗ್ಗೆಯಿಂದ 2,500 ಬಸ್ ಗಳು ಸಂಚರಿಸುತ್ತಿವೆ. ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ನಿರೀಕ್ಷೆಯಿದೆ ಎಂದರು.

ಮುಷ್ಕರದ ವೇಳೆ ಕಲ್ಲು ತೂರಾಟ ಮತ್ತು ಇತರ ಘಟನೆಗಳಿಂದಾಗಿ 59ಕ್ಕೂ ಹೆಚ್ಚು ಬಸ್ ಗಳು ಹಾನಿಗೀಡಾಗಿವೆ. ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ. ಸರ್ಕಾರ ಕಾನೂನಿನಂತೆ ಕ್ರಮ ತೆಗೆದುಕೊಳ್ಳಲಿದೆ ಎಂದು ಸವದಿ ಎಚ್ಚರಿಸಿದ್ದಾರೆ.

ಕೆಲಸಕ್ಕೆ ಮರಳುವಂತೆ ನೌಕರರಿಗೆ ಸರ್ಕಾರ ಮತ್ತೊಮ್ಮೆ ಮನವಿ ಮಾಡುತ್ತಿದೆ. ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರ ಕಠಿಣ ಆರ್ಥಿಕ ಸ್ಥಿತಿಯನ್ನು ಎದುರಿಸುತ್ತಿದೆ. ಈ ನಡುವೆ ಸರ್ಕಾರ ಒದಗಿಸಿರುವ ಸೌಲಭ್ಯದ ಹೊರತಾಗಿಯೂ ನೌಕರರು ಮುಷ್ಕರ ಮುಂದುವರಿಸಿದರೆ, ಹೆಚ್ಚಿನ ಖಾಸಗಿ ಬಸ್ ಗಳನ್ನು ಪರ್ಯಾಯವಾಗಿ ಬಳಸಿಕೊಳ್ಳಲಾಗುವುದು.

ಸಾಂಕ್ರಾಮಿಕ ಸಮಯದಲ್ಲಿ ಸಹ ಸಂಬಳ ಮತ್ತು ಇತರ ಸವಲತ್ತುಗಳನ್ನು ಸರ್ಕಾರ ಒದಗಿಸಿದೆ ಎಂಬುದನ್ನು ನೌಕರರು ಮರೆಯಬಾರದು. ಕೊರೊನಾದಿಂದಾಗಿ ಈಗಾಗಲೇ ಭಾದಿತವಾಗಿರುವ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಬೆಳವಣಿಗೆಯ ಮೇಲೆ ಇಂತಹ ಮುಷ್ಕರಗಳು ಇನ್ನಷ್ಟು ಪ್ರತಿಕೂಲ ಪರಿಣಾಮ ಬೀರುತ್ತವೆ ಎಂಬುದನ್ನು ನೌಕರರು ಅರಿತುಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಇನ್ನು ಗುರುವಾರದವರೆಗೆ 24,000 ಖಾಸಗಿ ಬಸ್ ಗಳನ್ನು ಸಾರ್ವಜನಿಕ ಸೇವೆಗಳಿಗೆ ಬಳಸಿಕೊಳ್ಳಲಾಗಿದೆ. ಜತೆಗೆ ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ನಿರೀಕ್ಷೆಯಿದೆ ಎಂದು ಎಂದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ