NEWSನಮ್ಮರಾಜ್ಯರಾಜಕೀಯ

ಶವ ಸಂಸ್ಕಾರ ಮಾಡಲೂ ಸಾಧ್ಯವಾಗದಷ್ಟು ನೀಚ ಮಟ್ಟಕ್ಕಿಳಿದ ಸರಕಾರ: ಸಂಸದ ಡಿಕೆ ಸುರೇಶ್‌ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರ ಮಾಡಲೂ ಸಾಧ್ಯವಾಗದಷ್ಟು ನೀಚ ಮಟ್ಟಕ್ಕಿಳಿದ ಸರಕಾರ ರಾಜ್ಯದಲ್ಲಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶವ ಸಂಸ್ಕಾರ ನಡೆಸಲು ಹಿಂದೂ ಧರ್ಮದಲ್ಲಿ ವಿಶೇಷ ಪದ್ಧತಿಗಳು ಇರುತ್ತವೆ. ಆದರೆ ಸರ್ಕಾರ ಅದಾವುದನ್ನು ಗಮನಕ್ಕೆ ತೆಗೆದುಕೊಳ್ಳದೆ ಸಿಕ್ಕಸಿಕ್ಕರೀತಿಯಲ್ಲಿ ಮೃತದೇಹಗಳನ್ನು ಸುಟ್ಟುಹಾಕುತ್ತಿದೆ. ಇದು ಮೃತರ ಸಂಬಂಧಿಗಳಲ್ಲಿ ಎಷ್ಟು ನೋವು ತರಿಸುತ್ತೆ ಎಂಬುದರ ಅರಿವೂ ಸರ್ಕಾರಕ್ಕೆ ಇಲ್ಲದಿರುವುದು ದುರಂತ ಎಂದು ಅಸಮಾಧಾನ ಹೊರಹಾಕಿದರು.

ಇಂದಿನ ಅವ್ಯವಸ್ಥೆ ಬಗ್ಗೆ ವಿಪಕ್ಷದ ನಾಯಕನಾಗಿ ನಾನು ಮಾತ್ರ ಹೇಳುತ್ತಿರುವುದಲ್ಲ. ಸಾಮಾನ್ಯ ಜನರು, ಚಿತ್ರನಟರು, ಕಲಾವಿದರು, ಸಾಹಿತಿಗಳು, ಬುದ್ಧಿಜೀವಿಗಳು ಸಹಾ ಹೇಳಿಕೊಂಡು ಕಣ್ಣೀರು ಹಾಕುತ್ತಿದ್ದಾರೆ ಎಂದು ತಿಳಿಸಿದರು.

ಚಿತಾಗಾರದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡಿ ಎಂದು ಸರದಿ ಸಾಲಿನಲ್ಲಿ ನಿಂತು ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ. ಆದರೂ, ಇದರ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ. ಹೀಗಾಗಿ ನಾಳೆ ರಾಜ್ಯ ಸಂಪುಟ ಸಚಿವರು ಬೆಂಗಳೂರು ಶಾಸಕರ ಸಭೆ ನಡೆಯಲಿದ್ದು ಆ ಸಭೆಯಲ್ಲಿ ವಿಚಾರಗಳನ್ನು ಮಂಡನೆ ಮಾಡಿ ಚರ್ಚಿಸುತ್ತೇವೆ ಎಂದು ತಿಳಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...