ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ನಡುವೆಯೇ ಮೆಜೆಸ್ಟಿಕ್ನಿಂದ ಚನ್ನಮ್ಮಕೆರೆ ಅಚ್ಚುಕಟ್ಟು ಪ್ರದೇಶವರೆಗೆ ಬಿಎಂಟಿಸಿ 13 ಕತ್ತರಿಗುಪ್ಪೆ ಘಟಕದ ಚಾಲಕ ಕಂ ನಿರ್ವಾಹಕ ತ್ಯಾಗರಾಜ್ ಬಿಎಂಟಿಸಿ ಬಸ್ ಓಡಿಸುತ್ತಿದ್ದಾರೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ, ಬಸ್ಗೆ ಹಾನಿಯಾದರೆ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಅವರನ್ನೆ ಹೊಣೆ ಮಾಡಬೇಕು ಎಂದು ಪೊಲೀಸ್ಠಾಣೆಯಲ್ಲಿ ದೂರು ನೀಡಿ ಬಂದಿರುವುದಾಗಿ ಹೇಳಿದ್ದಾರೆ.
ಇನ್ನು ನಾನು ಸಾರ್ವಜನಿಕ ಸೇವೆ ಮಾಡಲು ಬಂದಿದ್ದೇನೆ ಮಾಡುತ್ತೇನೆ. ನಮಗೆ ಸರ್ಕಾರ ಕೊರೊನಾ ಸಂಕಷ್ಟದಲ್ಲಿ 3 ತಿಂಗಳು ವೇತನ ನೀಡಿದೆ ಹೀಗಾಗಿ ನಾನು ಇಂದು ಪೂರ್ತಿದಿನ ಸೇವೆ ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.
ಇನ್ನು ಮುಷ್ಕರವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ಗಳು ಮತ್ತು ಕೆಲ ಆಟೋಚಾಲಕರು ಸುಲಿಗೆಗೆ ಇಳಿಸಿದ್ದಾರೆ.
ಕೆಂಗೇರಿ ಸೇರಿ ಮೈಸೂರು ರಸ್ತೆಯಲ್ಲಿ ಯಾವುದೇ ಬಸ್ಗಳ ಸಂಚಾರ ಇಲ್ಲ. ಇನ್ನು ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ತುಮಕೂರು, ಚಿಕ್ಕಮಗಳೂರು, ಮಂಗಳೂರು, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳ ಸಾರಿಗೆ ಡಿಪೋಗಳ ನೌಕರರು ಬೀದಿಗಿಳಿಯದಿರುವುದರಿಂದ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ.