ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರದ ಹಠಮಾರಿ ಧೋರಣೆಯಿಂದ ಬೇಸತ್ತಿರುವ ಸಾರಿಗೆ ನೌಕರರು ಇಂದಿನಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
ಸಾರಿಗೆ ನೌಕರರು ಆರನೇ ವೇತನ ಆಯೋಗ ನಮಗೂ ಜಾರಿ ಮಾಡಿ ಎಂಬ ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ ಈ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದ್ದ ಸರ್ಕಾರ ಮತ್ತು ಸಾರಿಗೆ ಸಚಿವರು ಇದುವರೆಗೂ ಸಬೂಬು ಹೇಳಿಕೊಂಡು ಬಂದಿದ್ದು, ಯಾವುದೇ ಪ್ರಮುಖ ಬದಲಾವಣೆ ಆಗದ ಕಾರಣ ನಾಳೆಯಿಂದ ಮುಷ್ಕರ ಮಾಡುತ್ತಿದ್ದಾರೆ.
ಇನ್ನು ಮುಷ್ಕರ ಹತ್ತಿಕ್ಕುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ಸಚಿವರು ಯತ್ನಿಸುತ್ತಿದ್ದು, ಇಂದು ಮೈಸೂರು, ಬೆಂಗಳೂರಿನಲ್ಲಿ ಖಾಸಗಿ ಬಸ್ಗಳನ್ನು ಬಿಡಲಾಗುತ್ತಿದೆ. ಆದರೆ ಸಮರ್ಪಕವಾಗಿ ಸೇವೆ ಸಿಗುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.
ಸಾರ್ವಜನಿಕರು ಸರ್ಕಾರಕ್ಕೆ ಬಸ್ ಬಂದ್ ಮಾಡಿರುವ ನೌಕರರ ಬೇಡಿಕೆ ಈಡೇರಿಸಿದೆ ಈ ರೀತಿ ಜನರಿಗೆ ತೊಂದರೆ ಕೊಡುವುದು ಎಷ್ಡು ಸರಿ ಎಂದು ಹಿಡಿ ಶಾಪಹಾಕುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಜನರಿಗೆ ತೊಂದರೆ ಆದರೂ ಸರಿ ನಾವು ಈಗೋವನ್ನು ಬಿಟ್ಟುಕೊಡುವುದಿಲ್ಲ ಎಂಬ ಧೋರಣೆ ಅನುಸರಿಸುತ್ತಿದ್ದಾರೆ.
ಈ ನಡುವೆ ನಮ್ಮ ಕೆಲಸ ಹೋದರೂ ಚಿಂತೆಯಿಲ್ಲ. ನಾವು ಇನ್ನು ಎಷ್ಟುದಿನ ಅಧಿಕಾರಿಗಳ ಕಿರುಕುಳ, ಕಡಿಮೆ ವೇತನಕ್ಕೆ ದುಡಿಯೋಣ ಹೇಳಿ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸವ ನಮಗೆ ಮಗಲು ಜಾಗವಿಲ್ಲ. ಒಂದು ರೀತಿ ಬೀದಿ ನಾಯಿಯಂತೆ ಸೊಳ್ಳೆಗಳು ಚಳಿಯಿಂದಲೇ ರಾತ್ರಿ ಪೂರ ಕಳೆಯಬೇಕು. ಸರಿಯಾದ ನಿದ್ರೆಯೂ ಇಲ್ಲ.
ಜತೆಗೆ ಎದ್ದಕೂಡಲೇ ನಿತ್ಯಕರ್ಮಗಳನ್ನು ಮುಗಿಸಲು ಸರಿಯಾದ ವ್ಯವಸ್ಥೆ ಇಲ್ಲ. ಇಂಥ ಪರಿಸ್ಥಿತಿಯಲ್ಲೂ ಸಂಸ್ಥೆಗೆ ಆದಾಯ ತರುತ್ತಿದ್ದೇವೆ. ಆದರೆ ಅದು ಸೋರಿಕೆಯಾಗುತ್ತಿದ್ದು, ಆ ಸೋರಿಕೆ ತಡೆಗೆ ಸರ್ಕಾರ ಮುಂದಾಗಿಲ್ಲ. ಅದರೆ ನಮಗೆ ವೇತನ ನೀಡುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಒಟ್ಟಾರೆ ಇಂದಿನಿಂದ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ. ಅದು ಎಷ್ಟು ದಿನಗಳಾದರೂ ಸರಿಯೇ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು 1.30 ಲಕ್ಷ ಸಾರಿಗೆ ನೌಕರರು ಒಗ್ಗಟ್ಟಿನಿಂದ ಹೇಳುತ್ತಿದ್ದಾರೆ.