CrimeNEWSನಮ್ಮರಾಜ್ಯ

ಹುಣಸೂರು- ಕಾರು ಅಪಘಾತ: ಸ್ಥಳದಲ್ಲೇ ಯೋಧ ಸಾವು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹುಣಸೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಿಆರ್‌ಪಿಎಫ್ ಯೋಧ ಮೃತಪಟ್ಟಿರುವುದು ಹುಣಸೂರು-ಪಿರಿಯಾಪಟ್ಟಣ ಹೆದ್ದಾರಿಯ ಅರಸು ಕಲ್ಲಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಗೊರಳ್ಳಿಯ ನಾಗರಾಜಶೆಟ್ಟಿ ಎಂಬುವರ ಪುತ್ರ ಅಣ್ಣಯ್ಯ ಶೆಟ್ಟಿ (35) ಮೃತ ಯೋಧ.

ಮಹಾರಾಷ್ಟ್ರದ ನಕ್ಸಲ್ ಏರಿಯಾದ ಗಡ್ಸರ್‌ನಲ್ಲಿ 14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಮೈಸೂರಿನಲ್ಲಿ ಕೆಲಸ ಮುಗಿಸಿಕೊಂಡು ತಮ್ಮ ಕಾರಿನಲ್ಲಿ ಊರಿಗೆ ಹಿಂದಿರುಗುತ್ತಿದ್ದಾಗ ಕಲ್ಲಹಳ್ಳಿ ಗೇಟ್‌ ಬಳಿ ಬ್ರೇಕ್ ವಿಫಲಗೊಂಡು ನಿಯಂತ್ರಣ ತಪ್ಪಿ ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಅವಘಡ ಸಂಭವಿಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಕಾರಿನಿಂದ ಶವವನ್ನು ಹೊರ ತೆಗೆದರು. ನಂತರ ಹುಣಸೂರಿನಲ್ಲಿ ಶವ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲುಮುಟ್ಟುವಂತಿತ್ತು. ಇಡೀ ಗ್ರಾಮಸ್ಥರು ಕಂಬನಿ ಮಿಡಿದರು. ಅನೇಕ ಸಹೋದ್ಯೋಗಿಗಳು ಅಂತಿಮ ದರ್ಶನ ಪಡೆದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ