NEWSನಮ್ಮರಾಜ್ಯರಾಜಕೀಯ

ಮುಖ್ಯಮಂತ್ರಿಗಳೇ ನಿಮ್ಮ ದಮನಕಾರಿ ನೀತಿಯಿಂದ ಸಾರಿಗೆ ನೌಕರರ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿಗಳೇ ನಿಮ್ಮ ದಮನಕಾರಿ ನೀತಿಯಿಂದ ಸಾರಿಗೆ ನೌಕರರ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ಮೊದಲು ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾರಿಗೆ ನೌಕರರ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟರೂ ಇವರ ನ್ಯಾಯಯುತ ಬೇಡಿಕೆಗಳನ್ನು ಅಲಿಸದೆ ಮುಖ್ಯಮಂತ್ರಿಗಳು ಕಣ್ಣು ಕಿವಿಗಳನ್ನು ಮುಚ್ಚಿಕೊಂಡು ಕುಳಿತಿದ್ದಾರೆ. ತಮ್ಮ ದಮನಕಾರಿ ನೀತಿಯಿಂದ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಜನತೆಯ ಕಷ್ಟಗಳನ್ನು ಕೇಳದ ಸರಕಾರ ರಾಜ್ಯದಲ್ಲಿ ಇದ್ದೂ ಪ್ರಯೋಜನವೇನು ಎಂದು ಕಿಡಿಕಾರಿದರು.

ಇಪ್ಪತ್ತೆರಡು ದಿನಗಳ ಹಿಂದೆಯೇ ಮುಷ್ಕರದ ಎಚ್ಚರಿಕೆಯನ್ನು ಸಾರಿಗೆ ನೌಕರರು ರಾಜ್ಯ ಸರಕಾರಕ್ಕೆ ನೀಡಿದ್ದರು. ಆದರೆ ಅವರ ನಾಯಕರನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸುವ ಆಸಕ್ತಿಯನ್ನು ಮುಖ್ಯಮಂತ್ರಿ ತೋರಿಸಿರಲಿಲ್ಲ. ಇದರ ಪರಿಣಾಮ ಇಂದು ಕೇವಲ ಸಾರಿಗೆ ನೌಕರರ ಮೇಲೆ ಮಾತ್ರವಾಗದೆ ಇಡೀ ರಾಜ್ಯದ ಜನತೆ ಮತ್ತು ರಾಜ್ಯದ ಆರ್ಥಿಕತೆಯ ಮೇಲೆ ಆಗುತ್ತಿದೆ. ಸಾರಿಗೆ ಸಂಪರ್ಕ ಇಲ್ಲದೆ ಜನತೆ ತತ್ತರಿಸಿ ಹೋಗಿದ್ದಾರೆ ಎಂದರು.

ಕಳೆದ ಮೂರು ದಿನಗಳಿಂದ ಪ್ರತಿಭಟನೆ ಗಂಭೀರವಾಗಿ ನಡೆಯುತ್ತಿದೆ. ನೌಕರರ ಬೇಡಿಕೆಗಳು ನಿಲ್ಲುವ ತನಕ ಈ ಹೋರಾಟ ನಿಲ್ಲುವುದಿಲ್ಲ. ಅಲ್ಲಿಯ ವರೆಗೆ ಮುಖ್ಯಮಂತ್ರಿಗಳು ಸುಮ್ಮನೆ ಕುಳಿತು ಆಟ ನೋಡುತ್ತಾರೆಯೇ? ನೌಕರರ ಮುಖಂಡರನ್ನು ಕರೆದು ಅವರ ಮನವಿಗಳನ್ನು ಆಲಿಸುವ ಜವಾಬ್ದಾರಿಯನ್ನು ನಡೆದುಕೊಳ್ಳದ ಸರಕಾರ ರಾಜ್ಯದಲ್ಲಿ ಇದ್ದು ಪ್ರಯೋಜನವೇನು? ಮುಖ್ಯಮಂತ್ರಿಗಳು ಈ ಮುಷ್ಕರದಿಂದ ಆಗಿರುವ ನಷ್ಟದ ಹೊಣೆ ಹೊರಲು ಸಿದ್ದರಿದ್ದಾರೆಯೇ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳೇ, ಈಗಾಗಲೇ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟ ನಿಮ್ಮ ಸರಕಾರದ ಅಹಂಕಾರವನ್ನು ಮುರಿದಿದೆ. ರೈತರು ಸರಕಾರವನ್ನು ಪ್ರಶ್ನಿಸುವ ಮೂಲಕ ನಿಮಗೆ ಬಿಸಿ ಮುಟ್ಟಿಸಿದ್ದಾರೆ. ಈಗ ಸಾರಿಗೆ ನೌಕರರ ಹೋರಾಟವೂ ಅದೇ ಹಾದಿಯನ್ನು ಹಿಡಿಯುತ್ತಿದೆ. ಅಲ್ಲದೇ, ರೈತ ಮುಖಂಡರು ಸಾರಿಗೆ ನೌಕರರ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ. ಇದು ರೈತ ನಾಯಕರೆಂದು ಕರೆಸಿಕೊಂಡಿರುವ ತಮ್ಮ ಕಣ್ಣುಗಳನ್ನು ಕೆಂಪಗಾಗಿಸಿದೆ. ತಕ್ಷಣ ರೈತ ನಾಯಕರನ್ನು ಕರೆದು ಅವರ ಮನವಿಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ ತಾಕೀತು ಮಾಡಿದರು.

ಆಮ್ ಆದ್ಮಿ ಪಕ್ಷ ಈಗಾಗಲೇ ಸಾರಿಗೆ ನೌಕರರ ಹೋರಾಟಕ್ಕೆ ಬೆಂಬಲ ನೀಡಿದೆ. ಹೋರಾಟದ ಆರಂಭದ ದಿನಗಳಿಂದಲೂ ಅವರ ಜೊತೆಗೆ ಕೈಜೋಡಿಸಿದೆ. ಇವರ ಹೋರಾಟದ ಒತ್ತಾಯಗಳು ಈಡೇರುವ ತನಕ ಪಕ್ಷ ಅವರಿಗೆ ಬೆಂಬಲವಾಗಿ ನಿಲ್ಲಲಿದೆ. ರಾಜ್ಯ ಸರಕಾರ ತಕ್ಷಣವೇ ಸಾರಿಗೆ ನೌಕರರ ನಾಯಕರನ್ನು ಕರೆದು ಅವರ ಬೇಡಿಕೆಗಳನ್ನು ಸ್ವೀಕರಿಸಿ ಈಡೇರಿಸಬೇಕಾಗಿ ಆಮ್ ಆದ್ಮಿ ಪಕ್ಷ ಒತ್ತಾಯಿಸುತ್ತದೆ ಎಂದರು.

ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಉಪಾಧ್ಯಕ್ಷ ಸುರೇಶ್ ರಾಥೋಡ್ ಹಾಗೂ ಡಾ. ಸತೀಶ್ ಕುಮಾರ್, ಸಾರಿಗೆ ನೌಕರರ ಮುಖಂಡರಾದ ರಾಮು ಮತ್ತು ಸತೀಶ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ