Breaking NewsNEWSನಮ್ಮರಾಜ್ಯ

ವಾರಾಂತ್ಯದ ಕರ್ಫ್ಯೂ ಸಮಯದಲ್ಲೂ ರಸ್ತೆಗಿಳಿಯಲಿವೆ 1200 ಬಿಎಂಟಿಸಿ ಬಸ್‌ಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗ ಸಂಸ್ಥೆಯಲ್ಲಿ ಪ್ರಯಾಣಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯದ ಕರ್ಫ್ಯೂ ಸಮಯದಲ್ಲೂ 1200 ಬಿಎಂಟಿಸಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷ, ಸಮರ್ಪಕ, ಸಾರಿಗೆ ಸೇವೆಗಳನ್ನು ಒದಗಿಸಲು ಬಿಎಂಟಿಸಿ ಬದ್ಧವಾಗಿದ್ದು, ಸರ್ಕಾರದ ಆದೇಶದಂತೆ ಬಿಎಂಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್‌ 21 ರಿಂದ ತನ್ನ ಸೇವೆಗಳನ್ನು ಪ್ರಾರಂಭಿಸಿದೆ.

ಮುಂದುವರಿದಂತೆ, ರಾಜ್ಯ ಸರ್ಕಾರ ಜೂನ್‌ 25ರ ಶುಕ್ರವಾರ ರಾತ್ರಿ 7 ರಿಂದ ಜೂನ್‌ 28ರ ಸೋಮವಾರ ಬೆಳಗ್ಗೆ 5 ವರೆಗೆ ವಾರಾಂತ್ಯದ ಕರ್ಫ್ಯೂ ಘೋಷಿಸಿದೆ. ಈ ದಿನಗಳಲ್ಲಿ, ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿ, ಹಾಲು ಮತ್ತು ವೈದ್ಯಕೀಯ ಚಟುವಟಿಕೆಗಳಿಗೆ ವ್ಯವಹರಿಸುವ ಅಂಗಡಿ ಇತ್ಯಾದಿಗಳನ್ನು ಕಾರ್ಯನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ ಮತ್ತು ಇತರ ವ್ಯವಹಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಈ ಕಾರಣದಿಂದಾಗಿ,ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರು ಬಿಎಂಟಿಸಿ ಬಳಸುವರೆಂದು ನಿರೀಕ್ಷಿಸಲಾಗಿದೆ. ಆದ್ದರಿಂದ, ಬಿಎಂಟಿಸಿ ವಾರಾಂತ್ಯದಲ್ಲಿ ತನ್ನ ಬಸ್ ಸೇವೆ ಕಡಿಮೆ ಮಾಡುತ್ತಿದ್ದು, ನಿತ್ಯ ಸಂಚರಿಸುತ್ತಿದ್ದ 4 ಸಾವಿರ ಬಸ್‌ಗಳ ಬದಲಾಗಿ 1200 ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಬಸ್‌ಗಳ ಕಾರ್ಯಾಚರಣೆಯ ವಿವರ 
25-06-2021 (ಶುಕ್ರವಾರ) 4000 ಬಸ್‌ಗಳು,
26-06-2021 (ಶನಿವಾರ) 1200 ಬಸ್‌ಗಳು,
27-06-2021 (ಭಾನುವಾರ) 1200 ಬಸ್‌ಗಳು,
28-06-2021 (ಸೋಮವಾರ) 4000 ಬಸ್‌ಗಳು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...