NEWSನಮ್ಮರಾಜ್ಯರಾಜಕೀಯ

ಪಟ್ಟಭದ್ರ ಹಿತಾಸಕ್ತಿಗಳ ಹುನ್ನಾರ, ಕೋವಿಡ್‌ನಿಂದ ಸಾರಿಗೆಗೆ 4 ಸಾವಿರ ಕೋಟಿ ರೂ. ನಷ್ಟ: ಸಚಿವ ಲಕ್ಷ್ಮಣ ಸವದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕಳೆದ ಮಾರ್ಚ್‌ನಿಂದ ಈವರೆಗೆ ಸುಮಾರು 4 ಸಾವಿರ ಕೋಟಿ ರೂ. ಸಾರಿಗೆಯ ನಾಲ್ಕೂ ನಿಗಮಗಳಿಗೆ ನಷ್ಟವಾಗಿದೆ. ಅದಕ್ಕೆ ಮುಖ್ಯ ಕಾರಣ, 20 ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಕೋವಿಡ್ ಪ್ರಕರಣಗಳು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೆಳಗಾವಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾರಿಗೆ ಬಸ್‌ಗಳ ಕಾರ್ಯಚರಣೆ ಕುಂಟಿತ ಆಗಿದೆ, ಅತಿವೃಷ್ಟಿ ಬಳಿಕ ಕೊರೊನಾ ಸಮಸ್ಯೆ, ಬಳಿಕ ಇಲಾಖೆ ಸಿಬ್ಬಂದಿ ಪ್ರತಿಭಟನೆ, ಬಳಿಕ ಮತ್ತೆ ಕೊರೊನಾ ಎರಡನೇ ಅಲೆ ಬಂದಿದ್ದರಿಂದ, ಸರ್ಕಾರದಲ್ಲಿ ಹೆಚ್ಚು ನಷ್ಟ ಸಾರಿಗೆ ಇಲಾಖೆಗೆ ಆಗಿದೆ ಎಂದರು.

ಸಾರಿಗೆ ಇಲಾಖೆ ನಷ್ಟ ಅನುಭವಿಸುತ್ತಿದ್ದರೂ 2600 ಕೋಟಿ ರೂ. ಸಂಬಳವನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಿದ್ದೇವೆ. 50 ಪ್ರತಿಶತ ಈಗ ಸಾರಿಗೆಯಲ್ಲಿ ಜನ ಪ್ರಯಾಣಿಸಲು ಅವಕಾಶ ಇರುವುದರಿಂದ ಬರುವ ಆದಾಯ ಅಧಿಕಾರಿಗಳು ಮತ್ತು ನೌಕರರ ಸಂಬಳ, ಇಂಧನಕ್ಕೆ ಸಾಲದಾಗಿದೆ.

ಈ ನಡುವೆ ಇನ್ನೂ ಮೂರು ನಾಲ್ಕು ತಿಂಗಳು ಹೆಚ್ಚು ಜನರ ಪ್ರಯಾಣಕ್ಕೆ ಅವಕಾಶ ಇಲ್ಲ. ನಮ್ಮ ಸರ್ಕಾರಕ್ಕೆ ನಷ್ಟ ಆದರೂ ಪರವಾಗಿಲ್ಲ, ಜನರ ಆರೋಗ್ಯ ಮುಖ್ಯ. ಈ ದೃಷ್ಟಿಯಿಂದ ಬಸ್‌ಗಳಲ್ಲಿ ಕೋವಿಡ್‌ ನಿಯಮ ಪಾಲಿಸಲಾಗುತ್ತಿದೆ ಎಂದು ಹೇಳಿದರು.

ಇನ್ನು ಜುಲೈ 5ರ ಬಳಿಕ ಸಾರಿಗೆ ಇಲಾಖೆ ಸಿಬ್ಬಂದಿ ಮತ್ತೆ ಮುಷ್ಕರ ನಡೆಸಲಿದ್ದಾರೆ ಎಂಬ ವಿಚಾರವಾಗಿ ಮಾತನಾಡಿದ ಸವದಿ, ಹಿಂದೆ ಸಾರಿಗೆ ಸಿಬ್ಬಂದಿ ಬಳಸಿಕೊಂಡು ಯಾರು ಕುತಂತ್ರ ಮಾಡಿದ್ದಾರೆ ಎಂಬುವುದು ತಿಳಿದಿದೆ.  ನೌಕರರಿಗೂ ಯಾರು ಹುನ್ನಾರ ಮಾಡಿದ್ದು ಎಂಬುವುದು ಗೊತ್ತಿದೆ.

ಇನ್ನು ಅವರ ಹುನ್ನಾರಕ್ಕೆ ನಾವು ಒಳಗಾಗಾಗಿದ್ದೇವೆ ಎಂದು ಸಾರಿಗೆ ಸಿಬ್ಬಂದಿಗೆ ಈಗ ಅರ್ಥವಾಗಿದೆ. ನೌಕರರ ಏಳಿಗೆ ಸಹಿಸಲಾಗದ ಪಟ್ಟಭದ್ರ ಹಿತಾಸಕ್ತಿಗಳು ಹುನ್ನಾರ ಮಾಡಿವೆ. ಆ ಹುನ್ನಾರ ಮಾಡಿದ್ದು, ಯಾರು ಎಂದು ನಾ ಹೇಳಲ್ಲ ಅದು ನಿಮಗೆ ಗೊತ್ತಾಗಲಿದೆ ಎಂದು ಮಾರ್ಮಿಕವಾಗಿ ತಿಳಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ