NEWSನಮ್ಮರಾಜ್ಯಶಿಕ್ಷಣ-

ಸೇವಾ ಭದ್ರತೆಗೆ ಆಗ್ರಹಿಸಿ ಬೆಂಗಳೂರು ವಿಶ್ವವಿದ್ಯಾಲಯದ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಕೆಂಗೇರಿ: ಬೆಂಗಳೂರು ವಿಶ್ವ ವಿದ್ಯಾ ಲಯದಹೊರಗುತ್ತಿ ಗೆ ನೌಕರರನ್ನು ಏಕಾಏಕಿ ಕರ್ತವ್ಯ ದಿಂದ ಬಿಡುಗಡೆ ಗೊಳಿಸಿರುವುದನ್ನು ಖಂಡಿಸಿ 400ಕ್ಕೂ ಹೆಚ್ಚು ಸಿಬ್ಬಂದಿಯು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರು ವಿಶ್ವ ವಿದ್ಯಾ ಲಯದಬೋಧಕೇತರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾ ಲಯ ಶಿಕ್ಷಕೇತರ ನೌಕರರ ಒಕ್ಕೂಟಗಳ ನೇತೃತ್ವದಲ್ಲಿ ಗುತ್ತಿಗೆ ಸಿಬ್ಬಂದಿ ವಿಶ್ವ ವಿದ್ಯಾ ಲಯದ ಆಡಳಿತಮಂಡಳಿ ವಿರುದ್ಧ ಧಿಕ್ಕಾರ ಕೂಗಿದರು.

ಕುಲಸಚಿವೆ ಕೆ.ಜ್ಯೋ ತಿ ಹಾಗೂ ವಿತ್ತಾಧಿಕಾರಿ ಪಾರ್ವತಿ ಅವರ ಸರ್ವಾಧಿಕಾರಿಧೋರಣೆಯಿಂದನೂರಾರು ಮಂದಿ ಸಿಬ್ಬಂದಿ ಬೀದಿಗೆ ಬಿದ್ದಿದ್ದೇವೆ. ಇವರನ್ನು ಸೇವೆಯಿಂದ ಮುಕ್ತಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೋಧಕೇತರ ಸಂಘದ ಕಾರ್ಯದರ್ಶಿ ಎಚ್.ಕೃಷ್ಪ ಪ್ಪ, ವ್ಯಾ ಪ್ತಿ ಮೀರಿ ಕಾರ್ಯ ನಿರ್ವಹಿಸುತ್ತಿರುವ ಕುಲಸಚಿವೆಜ್ಯೋ ತಿ ಅವರು ಕುಲಪತಿ ಹಾಗೂ ಸಿಂಡಿಕೇಟ್ ಸಭೆಯ ಗಮನಕ್ಕೂ ತರದೆ ಆದೇಶ ಹೊರಡಿಸಿದ್ದಾರೆ. ಇವರೊಂದಿಗೆ ವಿತ್ತಾಧಿಕಾರಿ ಕೈಜೋಡಿಸಿದ್ದು, ಸರ್ಕಾರಿ ಆದೇಶ ಪರಿಪಾಲನೆ ಹೆಸರಿನಲ್ಲಿ ಗುತ್ತಿಗೆ ನೌಕರರ ಜೀವನದಜೊತೆ ಆಟವಾಡುತ್ತಿದ್ದಾರೆ ಎಂದು ದೂರಿದರು.

ಯಾವುದೇ ಬದಲಿ ವ್ಯ ವಸ್ಥೆ ಮಾಡದೆ, ಏಕಾಏಕಿ ಆದೇಶಹೊರಡಿಸಲಾಗಿದೆ. ಹತ್ತಾರು ವರ್ಷಗಳಿಂದ ಸಿಬ್ಬಂ ದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದ ನಿರ್ಧಾರದಿಂದನೂರಾರು ಕುಟುಂಬಗಳು ಬೀದಿಗೆ ಬೀಳುವಹಂತದಲ್ಲಿವೆ’ ಎಂದು ಅಖಿಲ ಭಾರತ ವಿಶ್ವ ವಿದ್ಯಾ ಲಯ ಶಿಕ್ಷಕೇತರ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಬಿ.ಸಜ್ಜನ್ ಬೇಸರ ವ್ಯ ಕ್ತಪಡಿಸಿದರು.

ಹೊರಗುತ್ತಿ ಗೆ ನೌಕರರ ಸೇವಾವಧಿಯನ್ನು ಪರಿಗಣಿಸಿ, ಅವರಿಗೆ ಸೇವಾಭದ್ರತೆ ಒದಗಿಸಬೇಕು. ಪ್ರತಿ 6 ತಿಂಗಳಿಗೆ ನೀಡುವ ಸೇವಾಮುಂದುವರಿಕೆ ಆದೇಶವನ್ನು ಒಂದು ವರ್ಷಕ್ಕೆ ಹೆಚ್ಚಿಸಬೇಕು. ಪ್ರಸ್ತುತ ಹೊರಗುತ್ತಿಗೆ ನೌಕರರಿಗೆ ನೀಡುತ್ತಿರುವ ವೇತನವನ್ನೂ ಹೆಚ್ಚಿ ಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀ ಕರಿಸಿಮಾತನಾಡಿದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್,‘ ಕುಲಸಚಿವರ ಆದೇಶವನ್ನು ಹಿಂಪಡೆಯಲಾಗಿದೆ. ಸಿಬ್ಬಂದಿ ಸೇವೆಮುಂದುವರಿಯಲು ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಕುಲಪತಿಗಳ ಭರವಸೆ ಒಪ್ಪದ ಸಿಬ್ಬಂದಿ ಕುಲಸಚಿವರೇ ಆದೇಶ ಹಿಂಪಡೆಯುವಂತೆ ಪಟ್ಟು ಹಿಡಿದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ