NEWSನಮ್ಮರಾಜ್ಯರಾಜಕೀಯ

ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬಿಎಸ್‌ವೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎರಡು ವರ್ಷ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟರು ಎಂದು ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿದರು.

ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಬಿಎಸ್ವೈ ಆರಂಭದಿಂದಲೇ ತುಂಬಾ ಭಾವುಕರಾಗಿ ಮಾತನಾಡಿದರು. ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರು 75 ವರ್ಷ ಮೇಲ್ಪಟ್ಟ ನಾಯಕರಿಗೆ ಸ್ಥಾನಮಾನ ಕೊಡುವುದಿಲ್ಲ ಎಂಬ ತೀರ್ಮಾನವನ್ನು ತೆಗೆದುಕೊಂಡರು.ಆದರೆ, ಯಾರಿಗೂ ಅವಕಾಶ ಕೊಡಲಿಲ್ಲ ಆದರೆ ನನ್ನ ಬಗ್ಗೆ ಅತ್ಯಂತ ವಾತ್ಸಲ್ಯ, ಪ್ರೀತಿ ಮತ್ತು ವಿಶ್ವಾಸದಿಂದ ಅವಕಾಶ ಮಾಡಿಕೊಟ್ಟರು ಎಂದು ಕಣ್ಣೀರಿಡುತ್ತಲೇ ನಿರ್ಗಮಿಸುವ ಮಾತುಗಳನ್ನಾಡಿದರು.

ನಮ್ಮನ್ನು ಮಾತನಾಡಿಸಲು 50 ಮಂದಿ ಸಿಗದೇ ಇದ್ದ ಕಾಲದಲ್ಲಿ ಎಲ್ಲಾ ಕಾರ್ಯಕರ್ತರ ಜೊತೆಗೂಡಿ ರಾಜ್ಯಾದ್ಯಂತ ಪಾದಯಾತ್ರೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.

ಅಂದಿನಿಂದ ನಾನೆಂದು ಹಿಂದೆ ತಿರುಗಿ ನೋಡಲೇ ಇಲ್ಲ. ನನ್ನ ಕರ್ತವ್ಯವನ್ನು ಜನ ಮೆಚ್ಚುವ ರೀತಿಯಲ್ಲಿ ನಿರ್ವಹಿಸಿದೆ ಎಂಬ ತೃಪ್ತಿ ಮತ್ತು ಸಮಾಧಾನ ನನಗಿದೆ ಎಂದರು.

ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿ ಶಿವಮೊಗ್ಗಕ್ಕೆ ಬಂದು ಶಿಕಾರಿಪುರದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ನನ್ನ ಜೀವನವನ್ನು ಪ್ರಾರಂಭ ಮಾಡಿದೆ. ಆರ್ಎಸ್ಎಸ್ ಪ್ರಚಾರಕನಾಗಿ ಕೆಲಸ ಆರಂಭಮಾಡಿ ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಪುರಸಭೆ ಅಧ್ಯಕ್ಷನಾದೆ.

ಈ ವೇಳೆ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಯಿತು. ನಾನು ಸತ್ತೇ ಹೋದೆ ಅಂದುಕೊಂಡಿದ್ದರು. ಆದರೆ ಭಗವಂತನ ಕೃಪೆಯಿಂದ ಬದುಕಿದೆ. ಇನ್ನು ಮುಂದೆ ಬದುಕಿದರೆ ನಾಡಿನ ಜನತೆಗಾಗಿ ಎಂದು ಅಂದೇ ತೀರ್ಮಾನಿಸಿದೆ. ಅದರಂತೆ ನಡೆದುಕೊಂಡಿದ್ದೇನೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...