NEWSನಮ್ಮರಾಜ್ಯರಾಜಕೀಯ

ಸಿಎಂ ಕಚೇರಿಯೇ ಅವ್ಯವಹಾರದ ಕೇಂದ್ರಬಿಂದು: ದಿನಕ್ಕೆ 100 ಕೋಟಿ ರೂ.ಲೂಟಿ- ಬಿಜೆಪಿ ಶಾಸಕ ಗಂಭೀರ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯದಲ್ಲಿ ಒಂದು ದಿನಕ್ಕೆ 100 ಕೋಟಿ ರೂಪಾಯಿ ಲೂಟಿಯಾಗುತ್ತಿದೆ. ಮುಖ್ಯಮಂತ್ರಿ ಕಚೇರಿಯಲ್ಲಿಯೇ ಎಲ್ಲಾ ವ್ಯವಹಾರ ನಡೆಯುತ್ತದೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಬಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅಚ್ಚರಿಯ ಹೇಳಿಕೆ ನೀಡುವ ಮೂಲಕ ಗಂಭೀರ ಆರೋಪವನ್ನು ಮಾಡಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಬಳಿಕ ಮಾತನಾಡಿ, ರಾಜ್ಯದ ಬೊಕ್ಕಸ ಲೂಟಿಯಾಗುತ್ತಿದೆ. ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಉಳಿಯಬೇಕಾದರೆ ಬದಲಾವಣೆ ಆಗಬೇಕಿದೆ. ವಿಪಕ್ಷದವರಿಗೆ ದುಡ್ಡು ಹೋಗುತ್ತಿದೆ. ಈಗಾಗಿ ಸುಮ್ಮನಿದ್ದಾರೆ ಎಂದು ವಿಪಕ್ಷ ನಾಯಕರ ವಿರುದ್ಧವು ಕಿಡಿಕಾರಿದರು.

ಮಠಗಳು ಧರ್ಮಕಾರ್ಯಗಳನ್ನು ಮಾಡಬೇಕು.ಹೊರತು ರಾಜಕೀಯ ಮಾಡಬಾರದು. ಇನ್ನು ವಿಪಕ್ಷದವರು ಅವ್ಯವಹಾರದಲ್ಲಿ ಪಾಲುದಾರರಾಗಿದ್ದಾರೆ. ಲಿಂಗಾಯತರು ತಲೆತಗ್ಗಿಸುವ ರೀತಿಯಲ್ಲಿ ರಾಜ್ಯದಲ್ಲಿ ಆಡಳಿತ ನಡೆಯುತ್ತಿದೆ. ಮಠಾಧೀಶರಿಗೆ ದಕ್ಷಿಣೆ ಕೊಟ್ಟಿದ್ದಕ್ಕೆ ಅವರು ಮುಖ್ಯಮಂತ್ರಿ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಸಚಿವ ಶ್ರೀರಾಮುಲು ಅವರನ್ನು ಮುಗಿಸಲು ಪ್ರಯತ್ನಿಸಲಾಗುತ್ತಿದೆ. ಲಿಂಗಾಯತರು ಮತ್ತು ಕುರುಬರ ನಾಯಕರನ್ನು ಬದಿಗೆ ಸರಿಸಲಾಗುತ್ತಿದೆ. ಕಾಂಗ್ರೆಸ್ ನವರು ಮುಖ್ಯಮಂತ್ರಿ ಯಡಿಯೂರಪ್ಪನವರ ಎಂಜಲು ತಿಂದು ಬದುಕುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ