NEWSನಮ್ಮರಾಜ್ಯಸಂಸ್ಕೃತಿ

ಕೊರೊನಾ ಅನ್‌ಲಾಕ್‌ ಹಿನ್ನೆಲೆ: ಮಲೆ ಮಹದೇಶ್ವರಬೆಟ್ಟಕ್ಕೆ ಭಕ್ತರ ದಂಡು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಹದೇಶ್ವರಬೆಟ್ಟ : ಅನ್‌ಲಾಕ್‌ ಜಾರಿಯಾದ ಹಿನ್ನೆಲೆಯಲ್ಲಿ ದೇವಾಲಯಗಳು ಸಾರ್ವಜನಿಕರ ದರ್ಶನಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಚಾಮರಾಜನಗರ ಜಿಲ್ಲೆಯ ಹನೂರಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರು ಆಗಮಿಸಿ ಶ್ರೀಸ್ವಾಮಿಯ ದರ್ಶನ ಪಡೆದರು.

ಮಲೈಮಹದೇಶ್ವರ ಸ್ವಾಮಿ‌ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಈ ಕುರಿತು ಮಾತನಾಡಿ, ಕೋವಿಡ್ ಮಾರ್ಗಸೂಚಿಗಳ ಅನುಸಾರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಬಳಿ ಇರುವ ರಂಗಮಂದಿರದಲ್ಲಿ ಸಾರ್ವಜನಿಕರು ಕೂರಲು ನಿಗದಿತ ಅಂತರದಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಇನ್ನು ಸಾಲಿನಲ್ಲಿ ನಿಂತು ದೇವಸ್ಥಾನದ ಒಳಹೋಗಲು ಅವಕಾಶ ಇದೆ. ಪ್ರವೇಶ ದ್ವಾರದಲ್ಲೇ ಜನರಿಗೆ ಸ್ಯಾನಿಟೈಸರ್ ಮಾಡಲಾಗುತ್ತಿದ್ದು, ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಹೇಳಿದರು.

ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ. ದಾಸೋಹ, ತೀರ್ಥ ಪ್ರಸಾದ, ಲಾಡು ಪ್ರಸಾದ, ಸೇವೆಗಳು, ಉತ್ಸವಗಳಿಗೆ ಅವಕಾಶ ಕಲ್ಪಿಸಿಲ್ಲ. ಮುಡಿ ಸೇವೆ ಮಾಡಿಸುವಂತಿಲ್ಲ. ಬೆಟ್ಟದ ವಸತಿ ಗೃಹಗಳಲ್ಲಿ ತಂಗಲು ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಎಂದು ‌ ತಿಳಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...