NEWSಉದ್ಯೋಗನಮ್ಮರಾಜ್ಯ

ಸಾರಿಗೆ ತಾಂತ್ರಿಕ ಸಹಾಯಕ, ಭದ್ರತಾ ರಕ್ಷಕ ಸಿಬ್ಬಂದಿ ನೇಮಕದಲ್ಲಿ ವಿಳಂಬ: ಅಡಕತ್ತರಿಯಲ್ಲಿ ಸಿಲುಕಿದ ಅಭ್ಯರ್ಥಿಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದಲ್ಲಿ ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಸಿಬ್ಬಂದಿ ಹುದ್ದೆಗೆ 2018 ಮಾರ್ಚ್‌ನಲ್ಲಿ ಅರ್ಜಿ ಆಹ್ವಾನಿಸಿ 2020 ಫೆಬ್ರವರಿ 2ರಂದು ಪರೀಕ್ಷೆಯನ್ನು ನಡೆಸಲಾಗಿದೆ. ಆದರೆ ಈ ವರೆಗೂ ಕಟ್‌ ಆಫ್‌ ಲಿಸ್ಟ್‌ ಬಿಡುಗೆ ಮಾಡದೆ ನಿಗಮವು ಕೊರೊನಾ ಕಾರಣ ಹೇಳುತ್ತಿರುವುದು ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಮಾರ್ಚ್‌ 2018ರಲ್ಲಿ ಸಂಸ್ಥೆಯಲ್ಲಿ ಖಾಲಿ ಇರುವ 726 ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ ಸಂಬಂಧ ಆನ್‌ಲೈನ್ ಮೂಲಕ 29,479 ಮಂದಿ ಅರ್ಜಿ ಸಲ್ಲಿಸಿದ್ದು, ಆ ವೇಳೆ ಸಾಮಾನ್ಯ ಅಭ್ಯರ್ಥಿಗಳಿಂದ ತಲಾ 820 ರೂ. ಹಾಗೂ ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಂದ ಅರ್ಜಿ ಶುಲ್ಕವನ್ನು ಪಡೆದಿರುವ ನಿಗಮವು 2020 ಫೆಬ್ರವರಿ 2ರಂದು ಪರೀಕ್ಷೆಯನ್ನು ನಡೆಸಿದೆ.

ಜತೆಗೆ 2020 ಫೆಬ್ರವರಿ 3 ರಂದು ಪರೀಕ್ಷೆಯ ಕೀ ಉತ್ತರವನ್ನು ಬಿಡುಗಡೆ ಮಾಡಿದೆ. ಆದರೆ 2018 ಮಾರ್ಚ್‌ನಲ್ಲಿ ಅರ್ಜಿ ಪಡೆದಾಗಿನಿಂದ ಈವರೆಗೂ ಅಂದರೆ ಸುಮಾರು ಮೂರೂವರೆ ವರ್ಷ ಕಳೆಯುತ್ತ ಬಂದರೂ ಸಂಬಂಧಿಸಿದ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಸದೆ ಇರುವುದು ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡುತ್ತಿದೆ.

ಜತೆಗೆ ಅಭ್ಯರ್ಥಿಗಳ ವಯೋಮಿತಿ ಮೀರುತ್ತಿದ್ದು, 820 ರೂ. ಶುಲ್ಕ ಪಾವತಿಸಿ ಪರೀಕ್ಷೆ ತೆಗೆದುಕೊಂಡು ಪಾಸ್‌ ಆಗಿದ್ದರೂ ಕಟ್‌ ಆಫ್‌ ಲಿಸ್ಟ್‌ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದ್ದಾರೆ.

ಇನ್ನು ಯಾವಾಗ ಸಂಸ್ಥೆ ಕಟ್‌ ಆಫ್‌ ಲಿಸ್ಟ್‌ ಬಿಡುತ್ತದೆ ಎಂದು ವಿಚಾರಿಸಲು ನಿತ್ಯ ನೂರಾರು ಕರೆಗಳನ್ನು ಸಂಸ್ಥೆಯ ಸಹಾಯವಾಣಿಗೆ ಮಾಡುತ್ತಿದ್ದಾರೆ. ಆದರೆ, ಸಂಸ್ಥೆ ಕೊರೊನಾ ನೆಪಹೇಳಿಕೊಂಡು 29,479 ಅಭ್ಯರ್ಥಿಗಳಿಂದ ಸುಮಾರು 2.41 ಕೋಟಿ ರೂ.ಗಳನ್ನು ಅರ್ಜಿ ಶುಲ್ಕವಾಗಿ ಪಡೆದು ಕಾಲದೂಡುತ್ತಿದೆ.

ಇದಿಷ್ಟೇ ಅಲ್ಲದೆ ಸಂಸ್ಥೆಯಲ್ಲಿ ಖಾಲಿ ಇರುವ 200 ಭದ್ರತಾ ರಕ್ಷಕ ಸಿಬ್ಬಂದಿ ಹುದ್ದೆಗೆ 20,114 ಮಂದಿ ಅರ್ಜಿ ಸಲ್ಲಿಸಿದ್ದು ಇವರಿಂದಲೂ ಅರ್ಜಿ ಶುಲ್ಕವನ್ನು ಪಡೆದಿರುವ ನಿಗಮವು ಇಲ್ಲೂ ಕೋಟ್ಯಂತರ ರೂ.ಗಳನ್ನು ಪಡೆದಿದ್ದರೂ ಅರ್ಹರಿಗೆ ಹುದ್ದೆ ಕೊಡುವಲ್ಲಿ ಮೀನಮೇಷ ಎಣಿಸುತ್ತಿದೆ.

ಇನ್ನು ಕೊರೊನಾ ನೆಪ ಹೇಳಿಕೊಂಡು ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳವ ಬದಲಿಗೆ ಪುತ್ತೂರು ವಿಭಾಗದ ತಾಂತ್ರಿಕ ವಿಭಾಗದಲ್ಲಿ ಅಪ್ರೆಂಟಿಸ್ ಅಭ್ಯರ್ಥಿಗಳನ್ನು ತೆಗೆದುಕೊಂಡಿದ್ದು, ಈ ಮೂಲಕ ನಮಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಹಲವು ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಇನ್ನಾದರೂ ಸಂಸ್ಥೆಯು ಕಾನೂನು ಬದ್ಧವಾಗಿ ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಸಿಬ್ಬಂದಿ ಹುದ್ದೆಗೆ ನೇಮಕ ಮಾಡಿಕೊಳ್ಳಲು ಕಟ್‌ ಆಪ್‌ ಲಿಸ್ಟ್‌ ಬಿಡುಗಡೆ ಮಾಡಬೇಕು. ಈ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸ್ಥೆಯಲ್ಲಿ ಹುದ್ದೆ ಸಿಗಲಿದೆ ಎಂಬ ಆಸೆಯೊಂದಿಗೆ ಕಳೆದ 2018ರಿಂದ 2021ರವರೆಗೆ ಚಾತಕ ಪಕ್ಷಿಯಂತೆ ಕಾಯುತ್ತ ಕುಳಿತಿದ್ದರೂ ಸಂಸ್ಥೆಯಲ್ಲಿ ಒಳಗೊಳಗೆ ಅಪ್ರೆಂಟಿಸ್ ಅಭ್ಯರ್ಥಿಗಳನ್ನುತೆಗೆದುಕೊಳ್ಳುವ ಮೂಲಕ ಅರ್ಹ ಅಭ್ಯರ್ಥಿಗಳಿಗೆ ವಂಚನೆ ಮಾಡಲು ಹೊರಟಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...