NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ ಅಧಿಕಾರದಲ್ಲೂ ಇಲ್ಲ- ಸಿಎಂ ಸ್ಥಾನ ಕಾಲಿಯೂ ಇಲ್ಲ: ಸಂಸದ ಸುರೇಶ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನವರೆ ಎಂದು ಜಮೀರ್‌ ಅಹಮದ್‌ ಹೇಳಿಕೆಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್, ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ ಕಿಡಿಕಾರಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಾಂಗ್ರೆಸ್ ಪಕ್ಷದ ಈಗಿನ ಶಾಸಕರು ಮುಂದಿನ ಶಾಸಕಾಂಗ ಪಕ್ಷದ ಸದಸ್ಯರಲ್ಲ. 2023 ಕ್ಕೆ ಚುನಾವಣೆ ಇದೆ. ಚುನಾವಣೆ ಗೆಲ್ಲುವ ಬಗ್ಗೆ ಶಾಸಕರು ಕೆಲಸ ಮಾಡಬೇಕಿದೆ. ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ನಾವು ಭಾವಿಸಿದ್ದೇವೆ. ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಬಲಿಗ ಶಾಸಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಮಾಡಿದರು.

ಇನ್ನು ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು, ಅಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು, ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ. ಇನ್ನು ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಿರುವವರಿಗೆ ಒಳ್ಳೆಯದಾಗಲಿ. ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಸಿಎಂ ಸ್ಥಾನ ಕಾಲಿಯೂ ಇಲ್ಲ ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.

ಅದು ಶಾಸಕರ ಅಭಿಪ್ರಾಯ ನನ್ನದಲ್ಲ 
ಅದು ಶಾಸಕರ ಅಭಿಪ್ರಾಯವೇ ಹೊರತು ನನ್ನ ಅಭಿಪ್ರಾಯವಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆಯೂ ಸುರೇಶ್ ಉತ್ತರಿಸಿದ್ದಾರೆ. ಅವರು ಅವರ ವೈಯಕ್ತಿಕ ಅಭಿಪ್ರಾಯ ಹೇಳಬಹುದು, ನಾನು ನನ್ನ ವೈಯಕ್ತಿಕ ಅಭಿಪ್ರಾಯ ಹೇಳಬಹುದು. ಆದರೆ ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕಲ್ಲ? ಎಂದು ಸಿದ್ದರಾಮಯ್ಯ ಅವರಿಗೂ ಗುದ್ದು ಕೊಟ್ಟಿದ್ದಾರೆ.

ಮಲಗಿದ್ದವರೆಲ್ಲ ಈಗ ಎದ್ದಿದ್ದಾರೆ, ಹೀಗಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ವಿಪಕ್ಷದ ಸ್ಥಾನದಲ್ಲಿದ್ದು, ವಿಪಕ್ಷದ ಶಾಸಕರಂತೆ ಕೆಲಸ ಮಾಡಬೇಕಿದೆ. ಅವರ ಹೇಳಿಕೆಗಳು ಬರೀ ಕಾರ್ಯಕರ್ತರಲ್ಲಿ ಮಾತ್ರವಲ್ಲ, ಎಲ್ಲರಲ್ಲೂ ಗೊಂದಲ ಉಂಟು ಮಾಡುತ್ತದೆ ಎಂದು ಡಿಕೆಸು ಎಚ್ಚರಿಕೆ ಸಂದೇಶವನ್ನು ಈ ಮೂಲಕ ರವಾನಿಸಿದ್ದಾರೆ.

ಕೆಲವರಿಗೆ ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಚಟ
ಕೆಲವರಿಗೆ ಯಾರು ಏನಾದರಾಗಲಿ ನಾವು ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಚಟ ಉಳ್ಳವರು. ಜತೆಗೆ ಪಕ್ಷದ ಬಗ್ಗೆ ಉಡಾಫೆ ಮನಸ್ಥಿತಿಯವರು ಎಂದು ಅನಿಸುತ್ತಿದೆ. ನಿಜವಾದ ಕಾಂಗ್ರೆಸ್ ನಾಯಕರಾರೂ ಈ ರೀತಿ ಮಾತನಾಡುವುದಿಲ್ಲ, ಅನಗತ್ಯ ಭಾವನೆ ವ್ಯಕ್ತಪಡಿಸುವುದಿಲ್ಲ ಎಂದು ಹೇಳುವ ಮೂಲಕ ವಿಪಕ್ಷ ನಾಯಕರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ ಸಂಸದ ಡಿಕೆಸು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ