NEWSನಮ್ಮರಾಜ್ಯರಾಜಕೀಯ

ಆರ್‌ಎಸ್‌ಎಸ್ ಪ್ರಮುಖರ ಮನೆ ಕದ ತಟ್ಟಿದ ರಮೇಶ್ ಜಾರಕಿಹೊಳಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ನಿನ್ನೆ ಸುತ್ತೂರು ಮಠಕ್ಕೆ ಸಹೋದರನೊಂದಿಗೆ ಭೇಟಿ ನೀಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಶನಿವಾರ ಆರ್‌ಎಸ್‌ಎಸ್ ಪ್ರಮುಖರ ಮನೆ ಕದ ತಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಆರ್‌ಸ್‍ಎಸ್ ಪ್ರಮುಖ ಅರವಿಂದರಾವ್ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅವರ ಜತೆ ಚರ್ಚೆ ನಡೆಸಿದ್ದು, ಬಿಜೆಪಿ ಪಕ್ಷ ಅಧಿಕಾರ ಬರಲು ನನ್ನ ಪಾತ್ರ ತುಂಬಾ ಇದೆ. ಹೀಗಾಗಿ ಈಗ ಕೆಲ ಬಿಜೆಪಿ ನಾಯಕರು ನಮ್ಮ ವಿರುದ್ಧ ನಡೆಸುತ್ತಿರುವ ಷಡ್ಯಂತ್ರದ ಬಗ್ಗೆಸ್ವಲ್ಪಗಮನ ಹರಿಸಿ ಎಂದು ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಶತಾಯ ಗತಾಯ ಸಚಿವ ಸ್ಥಾನ ಪಡೆದುಕೊಳ್ಳುವ ನಿಟ್ಟಿನಲ್ಲಿ ನಿತ್ಯ ಕಾರ್ಯ ತಂತ್ರ ರೂಪಿಸುತ್ತಿರುವ ಜಾರಕಿಹೊಳಿ ಆರ್‍ಎಸ್‍ಎಸ್ ಪ್ರಮುಖರ ಮನೆಗೆ ತೆರಳಿ ಭೇಟಿ ನೀಡಿರುವುದು ಈಗ ಕೂತೂಹಲಕ್ಕೆ ಕಾರಣವಾಗಿದೆ. ಅರವಿಂದ ದೇಶಪಾಂಡೆ ಅವರ ಮನೆಯಲ್ಲಿ ಸುಮಾರು ಅರ್ಧಗಂಟೆ ಚರ್ಚೆ ನಡೆಸಿದ ಬಳಿಕ ಹೊರ ಬಂದು ಸುದ್ದಿಗಾರರಿಗೆ ಯಾವುದೇ ಪ್ರತಿಕ್ರಿಯೇ ನೀಡದೆ ನೋ ರಿಯಾಕ್ಷನ್ ಎಂದಷ್ಟೇ ಹೇಳಿ ತೆರಳಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ