NEWSನಮ್ಮರಾಜ್ಯಶಿಕ್ಷಣ-

ಶಿಕ್ಷಕರು-ವಿದ್ಯಾರ್ಥಿಗಳ ಸಂಪರ್ಕ ಏರ್ಪಡಲೇಬೇಕಿದೆ : ಶಿಕ್ಷಣ ತಜ್ಞರ ಸಭೆಯಲ್ಲಿ ಒಮ್ಮತದ ಅಭಿಪ್ರಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಲೆಗಳಿಂದ ಮಕ್ಕಳನ್ನು ಬಹುಕಾಲ ದೂರ ಉಳಿಸುವುದು ಮಕ್ಕಳ ಹಿತರಕ್ಷಣೆಯ ದೃಷ್ಟಿಯಿಂದ ಒಳ್ಳೆಯದಲ್ಲ ಹೀಗಾಗಿ ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆಯ ಸಲಹೆ ಪಡೆದೇ ಮುಂದುವರಿಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಶಾಲೆಯಿಂದ ಕೋವಿಡ್ ಹರಡಿದ ನಿದರ್ಶನವಿಲ್ಲ. ಸದ್ಯ ಶಾಲೆ ಆರಂಭಿಸದೇ ಇದ್ದರೂ ಯಾವುದಾದರೂ ರೂಪದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಪರ್ಕ ಏರ್ಪಡಲೇಬೇಕಿದೆ ಎಂಬ ಅಭಿಪ್ರಾಯ ಶುಕ್ರವಾರ ತಮ್ಮ ನೇತೃತ್ವದಲ್ಲಿ ನಡೆಸಿದ ವಿವಿಧ ಶಿಕ್ಷಣ ತಜ್ಞರು, ಶಿಕ್ಷಣ ಕುರಿತ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ವ್ಯಕ್ತವಾಯಿತು ಎಂದು ವಿವರಿಸಿದರು.

ಲಾಕ್‍ಡೌನ್ ಅನ್‍ಲಾಕ್ ಮಾಡಿದಂತೆ ವಿಕೇಂದ್ರೀಕರಣ ರೂಪದಲ್ಲಿ ಶಾಲೆಗಳನ್ನು ತೆರೆಯುವ ಕುರಿತೂ ಸಲಹೆಗಳು ವ್ಯಕ್ತವಾಗಿವೆ. ಶಾಲಾರಂಭದ ವಿಷಯದಲ್ಲಿ ಎಲ್ಲ ಕಡೆಯೂ ಒಂದೇ ಬಾರಿಗೆ ಶಾಲೆ ತೆರೆಯದಿದ್ದರೂ ತೊಂದರೆಯೇನೂ ಇಲ್ಲ. ತಾಲೂಕು, ಗ್ರಾಮಪಂಚಾಯಿತಿ ಇಲ್ಲವೇ ಜಿಲ್ಲಾ ಹಾಗೆಯೇ ಗ್ರಾಮೀಣ ಪ್ರದೇಶ, ನಗರ ಪ್ರದೇಶ ಹೋಬಳಿ, ತಾಲೂಕು ಕೇಂದ್ರವಾರು ತರಗತಿ ಆರಂಭಿಸುವ, ಇಲ್ಲವೇ ಇತರ ರೂಪದಲ್ಲಿ ಮಕ್ಕಳನ್ನು ಉಪಾಧ್ಯಾಯರು ತಲುಪುವ ವಿಷಯಗಳ ಕುರಿತೂ ಪ್ರತಿನಿಧಿಗಳಿಂದ ವಿವಿಧ ಸಲಹೆ ದೊರೆತಿದೆ ಎಂದು ತಿಳಿಸಿದರು.

ವಿಶೇಷವಾಗಿ ಡಾ. ದೇವಿಶೆಟ್ಟಿ ವರದಿಯಂತೆ ತರಗತಿವಾರು, ಆಯಾ ಪ್ರದೇಶದ ಪಾಸಿಟಿವಿಟಿ ದರದ ಅನ್ವಯ ಶಾಲಾ ತರಗತಿಗಳನ್ನು ತೆರೆಯುವುದಾಗಲಿ ಇಲ್ಲವೇ ಶಾಲಾವರಣದಲ್ಲಿ ವಿದ್ಯಾಗಮ ತರಗತಿಗಳನ್ನು ನಡೆಸುವುದರ ಕುರಿತು ಆದ್ಯತೆ ನೀಡಬೇಕೆಂಬುದು ಬಹುತೇಕರ ಸಲಹೆಯಾಗಿದ್ದು, ಸದ್ಯದಲ್ಲೇ ಟಾಸ್ಕ್​ಫೋರ್ಸ್ ರಚಿಸಿ ಒಂದು ತೀ‌ರ್ಮಾನಕ್ಕೂ ಬರಲಾಗುವುದು ಎಂದೂ ತಿಳಿಸಿದರು.‌

ಶಾಲಾರಂಭವನ್ನು ಆಯಾ ಪ್ರದೇಶವಾರು ಕೋವಿಡ್ ಕನಿಷ್ಠ ಪಾಸಿಟಿವಿಟಿ ಆಧಾರದಲ್ಲಿ ತೆರೆಯಬಹುದೆಂಬ ಡಾ. ದೇವಿಶೆಟ್ಟಿ ವರದಿಯ ಅಂಶಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕೋವಿಡ್ ಕಾಲಘಟ್ಟದಲ್ಲಿ ಶಾಲಾರಂಭ ಸೇರಿದಂತೆ ಮಕ್ಕಳ ಕಲಿಕಾ ನಿರಂತರತೆ ಬಗ್ಗೆಯೂ ಭಿಪ್ರಾಯ ವ್ಯಕ್ತವಾಯಿತು ಎಂದರು.

ಕೋವಿಡ್ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಕಲಿಕಾ ನಿರಂತರತೆ, ಕಲಿಕಾ ಸಾಮಗ್ರಿ, ಕಲಿಕಾ ನಿರಂತರ ಮೌಲ್ಯಮಾಪನ ಕುರಿತು ಕಾಲಕಾಲಕ್ಕೆ ಸಲಹೆ ನೀಡಲು ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಿ, ವಿದ್ಯಾರ್ಥಿ ಕಲಿಕೆಯ ಪರಾಮರ್ಶೆಗೆ ನಿರಂತರ ಸೂತ್ರವನ್ನು ರಚಿಸಲಾಗುವುದು ಎಂದು ತಿಳಿಸಿದರು.

ಆನ್-ಲೈನ್ ದೂರದರ್ಶನ ಚಂದನಾ ಮೂಲಕ ಸಂವೇದಾ ಪಾಠಗಳು, ಯೂ-ಟ್ಯೂಬ್, ವಾಟ್ಸ್​ಆಪ್ ಮೂಲಕ ಹಾಗೆಯೇ ಮಕ್ಕಳು ವಾರದಲ್ಲಿ ಒಂದು ದಿನ ಶಾಲೆಗೆ ಬಂದು ಸಿದ್ಧಪಾಠಗಳನ್ನು ತೆಗೆದುಕೊಂಡು ಹೋಗಿ ಇನ್ನೊಂದು ದಿನ ಅವುಗಳೊಂದಿಗೆ ಬಂದು ಸಂಶಯಗಳ ನಿವಾರಣೆಗೆ ಶಿಕ್ಷಕರನ್ನು ಭೇಟಿ ಮಾಡುವಂತಹುದು, ಶಾಲೆಗೆ ಬರಲಾಗದ ಮಕ್ಕಳಿಗೆ ಆಯಾ ಗ್ರಾಮಪಂಚಾಯಿತಿ ಅಧಿಕಾರಿಗಳ ಇಲ್ಲವೇ ಸ್ವಯಂ ಸೇವಕರ ಮೂಲಕ ಸಿದ್ಧಪಠ್ಯಗಳನ್ನು ನೀಡುವಂತಹ ಸಲಹೆಗಳೂ ವ್ಯಕ್ತವಾದವು ಎಂದು ವಿವರಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...