CrimeNEWSನಮ್ಮರಾಜ್ಯಶಿಕ್ಷಣ-

ಶುಲ್ಕ ಭರಿಸಿಲ್ಲ ಎಂದು SSLC ವಿದ್ಯಾರ್ಥಿಯ ಹೊರಹಾಕಿದ ಶಾಲೆ: ನೊಂದ ವಿದ್ಯಾರ್ಥಿಯಿಂದ ಆತ್ಮಹತ್ಯೆಗೆ ಯತ್ನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶಾಲಾ ಶುಲ್ಕ ಭರಿಸಿಲ್ಲ ಎಂದು ಪರೀಕ್ಷೆ ಕೊಠಡಿಯಿಂದ ಹೊರಹಾಕಿ ಮಾನಸಿಕ ಹಿಂಸೆಕೊಟ್ಟ ಶಾಲೆಯ ಆಡಳಿತ ಮಂಡಳಿಯ ನಡೆಗೆ ನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಎಚ್‌ ಎಸ್‌ಆ‌ರ್  ಬಡಾವಣೆಯಲ್ಲಿ ಇಂದು ನಡೆದಿದೆ.

ಚನ್ನಸಂದ್ರ ನಿವಾಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜಯಂತ್‌ ಆತ್ಮಹತ್ಯೆಗೆ ಯತ್ನಿಸಿದ್ದು, ಪಾಲಕರ ಸಮಯ ಪ್ರಜ್ಞೆಯಿಂದ ಆತನ ಜೀವವನ್ನು ಉಳಿಸಿಕೊಂಡಿದ್ದಾರೆ.

ಇಂದು ಎಚ್‌ ಎಸ್‌ಆ‌ರ್  ಬಡಾವಣೆಯಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಜಯಂತ್‌ ಕಿರು ಪರೀಕ್ಷೆ ಇದ್ದಿದ್ದರಿಂದ ಪರೀಕ್ಷೆ ಕೊಠಡಿಗೆ ಹೋಗಿದ್ದಾನೆ. ಆ ವೇಳೆ ಶಾಲಾ ಆಡಳಿತಮಂಡಳಿ ಆತನಿಗೆ ಪರೀಕ್ಷೆ ಬರೆಯಲು ಅನುಮತಿ ನೀಡದೇ ಹೊರಹಾಕಿದೆ. ಜತೆಗೆ ನಿಂದಿಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿ ಮನೆಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಶಾಲೆಗೆ ಈಗಗಾಲೇ 36 ಸಾವಿರ ರೂ. ಶುಲ್ಕ ಕಟ್ಟಿದ್ದು ಇನ್ನು 50 ಸಾವಿರ ರೂ. ಕಟ್ಟಬೇಕಿತ್ತು. ಆದರೆ ಆ ಶುಲ್ಕವನ್ನು ಕಟ್ಟುವವರೆಗೂ ನೀನು ಶಾಲೆಗೆ ಬರಬೇಡ ಹೋಗು ಎಂದು ಹೊರಹಾಕಿದ್ದಾರೆ.

ವಿದ್ಯಾರ್ಥಿಯ ತಂದೆ ಶಾಲೆಗೆ ಬಂದು 50 ಸಾವಿರ ರೂ. ಬಾಕಿಯಿದ್ದು ಅದನ್ನು ಒಂದು ವಾರ ಕಾಲವಕಾಶಕೊಡಿ ನಾನು ಕಟ್ಟುತ್ತೇನೆ ಎಂದು ಹೇಳಿದ್ದಾರೆ. ಆದರೆ ಶಾಲೆ ಪ್ರಾಂಶುಪಾಲರು ಅವರನ್ನು ಕರೆದು ಮಾತನಾಡುವ ಸೌಜನ್ಯವನ್ನೂ ತೋರದೆ ಫೀ ಕಟ್ಟುದಿದ್ದರೆ ಅವರನ್ನು ಒಳಗೆ ಕಳುಹಿಸಿ ಇಲ್ಲದಿದ್ದರೆ ಹೋಗಲು ಹೇಳಿ ಎಂದು ಸ್ವಾಗತಕಾರಣಿ (Receptionist) ಬಳಿ ಹೇಳಿದ್ದಾರೆ.

ಆದರೂ ಪ್ರಾಂಶುಪಾಲರನ್ನು ಭೇಟಿ ಮಾಡಲು ಪ್ರಯತ್ನಿಸಿದೆ ಅದು ಆಗಲಿಲ್ಲ. ಇತ್ತ ಮಗ ನೊಂದುಕೊಂಡು ಮನೆಗೆ  ಹೋಗಿದ್ದಾನೆ ಎಂದು ತಂದೆ ಕೂಡ ಆತನ ಹಿಂದೆಯೇ ಹೋಗಿದ್ದಾರೆ. ಅಷ್ಟರಲ್ಲೇ ಆತ ರೂಂ ಸೇರಿಕೊಂಡು ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸುತ್ತಿದ್ದ. ಕೂಡಲೇ ಬಾಗಿಲನ್ನು ಒಡೆದು ಒಳನುಗ್ಗಿ ರಕ್ಷಿಸಿದ್ದೇವೆ ಎಂದು ಪಾಲಕರು ಹೇಳಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ