NEWSನಮ್ಮರಾಜ್ಯವಿಜ್ಞಾನ

ನಮ್ಮ ಸಮಸ್ಯೆ ಆಲಿಸದ ಸಂಘಟನೆಗಳ ಮುಖಂಡರೊಂದಿಗೆ ಸರ್ಕಾರ ಸಭೆ ನಡೆಸುತ್ತಿದೆ: ಸಾರಿಗೆ ನೌಕರರ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರದ ಉಡಾಫೆಯಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾದರ ಎಂಬ ಆರೋಪ ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಹೌದು! ಸರ್ಕಾರ ನಿನ್ನೆ ವಿಧಾನಸೌಧ ಚಲೋ ಹಮ್ಮಿಕೊಂಡು ಹೋರಾಟ ಮಾಡುತ್ತಿದ್ದ ಫ್ರೀಡಂ ಪಾರ್ಕ್‌ಗೆ ಯಾವೊಬ್ಬ ಸಚಿವರು ಬಾರದ ಹಿನ್ನೆಲೆಯಲ್ಲಿ ಮತ್ತು ಪ್ರತಿಭಟನಾ ನಿರತರ ಮೇಲೆ ಪೊಲೀಸರನ್ನು ಬಿಟ್ಟು ದಬ್ಬಾಳಿಕೆ ನಡೆಸಿದ್ದರಿಂದ ಕೋಪಗೊಂಡು ನೌಕರರು ಇಂದು ಹೋರಾಟಕ್ಕೆ ಇಳಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನೊಂದೆಡೆ ಸಾರಿಗೆ ನೌಕರರ ಮುಷ್ಕರಕ್ಕೆ ರೈತ ಮುಖಂಡ ಬಂದು‌ ಕರೆ ನೀಡುವುದು ತಪ್ಪ ಎಂಬ ರೀತಿಯಲ್ಲಿ ಕೆಲ ಮಾಧ್ಯಮಗಳು ವರದಿ ಮಾಡುತ್ತಿವೆ. ಇದನ್ನು ನೋಡಿದರೆ ನಮಗೆ ಹಾಸ್ಯಸ್ಪದ ಎನಿಸುತ್ತಿದೆ ಎಂದು ಪ್ರತಿಭಟನಾ ನಿರತ ಸಾರಿಗೆ ನೌಕರರು ಹೇಳುತ್ತಿದ್ದಾರೆ.

ಅಂದರೆ, ನಮ್ಮ ಹೋರಾಟಕ್ಕೆ ರೈತ ಮುಖಂಡರು ಬಂದಿದ್ದಾರೆ, ಅವರ ಬೆಂಬಲದೊಂದಿಗೆ ನಾವು ಹೋರಾಟಕ್ಕೆ ಇಳಿದಿದ್ದೇವೆ. ಇದಕ್ಕೆ ಕಾರಣ ನಮ್ಮ ಸಂಘಟನೆಗಳ ಮುಖಂಡರು ನಮ್ಮ ಸಮಸ್ಯೆಗೆ ಸ್ಪಂದಿಸದಿರುವುದು. ಅವರು ನಮ್ಮ ಸಮಸ್ಯೆ ಆಲಿಸಿದ್ದರೆ ನಾವು ಯಾಕೆ ಬೇರೊಬ್ಬ ನಾಯಕರ ಕಾಲಿಗೆ ಬೀಳಬೇಕಾಯಿತು ಎಂದು ಸಾರಿಗೆ ಸಂಘಟನೆಗಳ ವಿರುದ್ಧ ನೌಕರರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

ಇನ್ನು ನಮ್ಮ ವಿರುದ್ಧ ಮತ್ತು ಸರ್ಕಾರ ಪರವಿರುವ ಸಂಘಟನೆಗಳೊಂದಿಗೆ ಸಭೆ ನಡೆಸಿದರೆ ನಾವು ಪ್ರತಿಭಟನೆಯನ್ನು ಯಾವುದೇ ಕಾರಣಕ್ಕೂ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು  ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್