NEWSರಾಜಕೀಯಸಂಸ್ಕೃತಿ

ಸರ್ಕಾರ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ರಚಿಸಲಿದೆ : ಡಿಸಿಎಂ ಅಶ್ವತ್ಥನಾರಾಯಣ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಒಂದು ಜನಾಂಗಕ್ಕೆ ನಿಗಮ ರೂಪಿಸಿದಾಗ ಬೇರೆ ಸಮುದಾಯಗಳ ಜನರೂ ಬೇಡಿಕೆ ಸಲ್ಲಿಸುತ್ತಾರೆ. ಈ ವಿಚಾರದಲ್ಲಿ ಜನರ ಭಾವನೆಗಳಿಗೆ ಪೂರಕವಾಗಿ ಸರ್ಕಾರ ಕೆಲಸ ಮಾಡಬೇಕಾಗುತ್ತದೆ. ಅಂದರೆ, ಒಕ್ಕಲಿಗ ಸಮುದಾಯದ ಅಪೇಕ್ಷೆಯ ಮೇರೆಗೆ ಸರ್ಕಾರ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ರಚನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ತುಮಕೂರಿನಲ್ಲಿ ಆನ್‌ಲೈನ್ ತರಗತಿ ಪರಿಶೀಲಿಸಿದ ನಂತರ ಮಾತನಾಡಿ, ಯಾವುದೇ ಒಂದು ಜಾತಿ, ಜನಾಂಗದ ಅಭಿವೃದ್ಧಿ ಕಾರಣಕ್ಕೆ ನಿಗಮ ರಚನೆ ಆಗುತ್ತದೆ. ಹೀಗಾಗಿ ಮರಾಠಿ ಭಾಷೆಗೆ ಮಂಡಳಿ ರಚನೆಯಾಗುತ್ತದೆ ಎಂದಾದರೇ ಒಕ್ಕಲಿಗರಿಗೂ ಅಭಿವೃದ್ಧಿ ಮಂಡಳಿ ರಚಿಸಲೇಬೇಕು ಎಂದರು.

ಯಡಿಯೂರಪ್ಪ ಅವರ ಇತ್ತೀಚಿನ ದೆಹಲಿ ಪ್ರವಾಸದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಕಾರ್ಯಕ್ರಮವೇ ನಿಗದಿ ಆಗಿರಲಿಲ್ಲ. ಹೀಗಿದ್ದಾಗ ಭೇಟಿಗೆ ಶಾ ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡಬಾರದು. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಮತ್ತೊಮ್ಮೆ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದರು.

ನಮ್ಮ ಪಕ್ಷದೊಳಗೆ ಏನೆ ಇದ್ದರು ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದ ಅವರು, ನಿಮ್ಮ ಪಕ್ಷದಲ್ಲಿನ ತೂತುಗಳನ್ನು ಮೊದಲು ಸರಿಪಡಿಸಿ ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ