NEWSನಮ್ಮಜಿಲ್ಲೆ

ಎರಡನೇ ಹಂತದ ನಮ್ಮ ಮೆಟ್ರೋ ಸಂಚಾರಕ್ಕೆ ಸಿಎಂ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೂ ನಾಳೆಯಿಂದ ಹಸಿರು ಮಾರ್ಗದ ಮೆಟ್ರೋ ರೈಲ್‌ ಸಂಚರಿಸಲಿದೆ.

ಈ ಮೂಲಕ ಹೊಸವರ್ಷದ ಹೊಸ್ತಿಲಲ್ಲೇ ಸಂಕ್ರಾಂತಿ ಹಬ್ಬಕ್ಕೆ ಮೆಟ್ರೋ ಇಲಾಖೆ ರಾಜಧಾನಿಯ ಜನರಿಗೆ ಸಿಹಿ ಸುದ್ದಿ ನೀಡಿದೆ. ಎರಡನೇ ಹಂತದಲ್ಲಿ ನಮ್ಮ ಮೆಟ್ರೋ ಕೈಗೆತ್ತಿಕೊಂಡಿರುವ ಕನಕಪುರ ರಸ್ತೆಯ ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದವರೆಗೂ ವಿಸ್ತರಿತ ಹಸಿರು ಮಾರ್ಗದ ಮೆಟ್ರೋ ರೈಲನ್ನು ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಕೋಣನಕುಂಟೆ ಕ್ರಾಸ್ ಮೆಟ್ರೋ ನಿಲ್ದಾಣದಲ್ಲಿ ಉದ್ಘಾಟಿಸಿದರು.

ಯಡಿಯೂರಪ್ಪ ಅವರು 6 ಕಿ.ಮೀ. ಉದ್ದದ ಈ ಮೆಟ್ರೋ ಗ್ರೀನ್ ಲೈನ್ ಉದ್ಘಾಟನೆ ಮಾಡಿದ್ದು, ಈ ವೇಳೆ ಸಚಿವರಾದ ಆರ್. ಅಶೋಕ್, ಸುರೇಶ್ ಕುಮಾರ್ ಹಾಗೂ ವಿಶ್ವನಾಥ್, ಕೇಂದ್ರ ಸಚಿವ ಸದಾನಂದ ಗೌಡ ಭಾಗಿಯಾಗಿದ್ದರು.

ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೂ ಸುಮಾರು 500 ಕೋಟಿ ಋೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 6.29 ಕಿಮಿ ಉದ್ದದ ಮೆಟ್ರೋ ಇದಾಗಿದೆ. ಇನ್ನು ಮಾರ್ಗದಲ್ಲಿ ಕೋಣನ ಕೊಂಟೆ ಕ್ರಾಸ್, ಕೃಷ್ಣ ಲೀಲಾ ಪಾರ್ಕ್, ವಾಜರಹಳ್ಳಿ, ತಲಗಟ್ಟಪುರ, ಅಂಜನಪುರ ಟೌನ್ ಶಿಪ್ ಎಂಬ ಐದು ಎಲಿವೇಟೆಡ್ ನಿಲ್ದಾಣ ನಿರ್ಮಾಣ ಮಾಡಲಾಗಿದ್ದು, ಉದ್ಘಾಟನೆಗೊಂಡ ಒಂದು ದಿನದ ಬಳಿಕ ಅಂದರೆ ಜನವರಿ 15 ರಿಂದ ಜನ ಬಳಕೆಗೆ ಲಭ್ಯವಾಗಲಿದೆ. ಟ್ರಾಫಿಕ್ ಕಿರಿಕಿರಿಯಿಂದ ಬಳಲುತ್ತಿದ್ದ ಜನರಿಗೆ ಇದೀಗ ಸಂತೋಷದ ಸುದ್ದಿ ಸಿಕ್ಕಿದೆ.

ಕೆಲವು ತಿಂಗಳಿನಿಂದ ಈ ಮಾರ್ಗದ ಸಿವಿಲ್ ಕಾಮಗಾರಿ, ಹಳಿ ಜೋಡಣೆ ಕಾರ್ಯ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯ ಕಂಡಿದೆ. ಇದರ ಜತೆಗೆ ಆಕರ್ಷಣೀಯವಾಗಿ ಒಳಾಂಗಣ ವಿನ್ಯಾಸ ಮಾಡಲಾಗಿದೆ. ಸದ್ಯಕ್ಕೆ ರೂಪಿಸಲಾಗಿರುವ ಸಾಮಾನ್ಯ ದರವನ್ನೇ ಪ್ರಯಾಣಿಕರು ಈ ಮಾರ್ಗದಲ್ಲೂ ಭರಿಸಬೇಕಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್