NEWSನಮ್ಮರಾಜ್ಯವಿಜ್ಞಾನ

ಸುಲಿಗೆಗೆ ಇಳಿದ ಕೆಲ ಆಟೋ ಚಾಲಕರು: ಸಾರಿಗೆ ನೌಕರರು- ಪೊಲೀಸರ ನಡುವೆ ವಾಗ್ವಾದ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬಿಎಂಟಿಸಿಯ ಬನಶಂಕರಿ ಟಿಟಿಎಂಸಿ ಬಸ್‌ ನಿಲ್ದಾಣ ಬಳಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಪೊಲೀಸರು ಮತ್ತು ನೌಕರರ ನಡುವೆ ಮಾತಿನ ಚಕಮಕಿ ನಡೆಯಿತು.

ಬಸ್‌ಗಳನ್ನು ರಸ್ತೆಯಲ್ಲಿ ನಿಲ್ಲಿಸದೆ ನಿಮ್ಮ ಟಿಟಿಎಂಸಿ ಬಸ್‌ ನಿಲ್ದಾಣಕ್ಕೆ ತೆದುಕೊಂಡು ಹೋಗಿ ಎಂದು ಪೊಲೀಸರು ನೌಕರರ ಮೇಲೆ ಒತ್ತಡ ಏರಿದ್ದರಿಂದ ನಿಲ್ದಾಣದ ಒಳಗೆ ಈಗಾಗಲೇ ಸಾಕಷ್ಟು ಬಸ್‌ಗಳು ನಿಂತಿರುವುದರಿಂದ ಅಲ್ಲಿ ಜಾಗವಿಲ್ಲ. ಹೀಗಾಗಿ ನಾವು ಎಲ್ಲಿ ನಿಲ್ಲಿಸಬೇಕು ನೀವೆ ಹೇಳಿ ಎಂದು ನೌಕರರು ಕೇಳಿದಕ್ಕೆ ಸಿಟ್ಟುಗೊಂಡ ಪೊಲೀಸರು ಇಲ್ಲಿ ನಿಲ್ಲಬೇಡಿ ಇಲ್ಲಾದರೂ ನಿಲ್ಲಿಸಿಕೊಳ್ಳಿ ಎಂದು ಗದರಿದರು. ಇದರಿಂದ ಕುಪಿತಗೊಂಡ ನೌಕರರು ತೀವ್ರ ವಿರೋಧ ನಡೆಸಿದ್ದರಿಂದ ಇಬ್ಬರ ನಡುವೆ ವಾಗ್ವಾದ ನಡೆಯಿತು.

ಇನ್ನು ಯಶವಂತಪುರ ಟಿಟಿಎಂಸಿ ಬಸ್‌ ನಿಲ್ದಾಣದ ಬಳಿ ನೌಕರರು ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದು, ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಕೈಬಿಡುವ ಮಾತೆ ಇಲ್ಲ ಎಂದು ಹೇಳುತ್ತಿದ್ದಾರೆ.

ಕೆಂಗೇರಿ ಸೇರಿ ಮೈಸೂರು ರಸ್ತೆಯಲ್ಲಿ ಯಾವುದೇ ಬಸ್‌ಗಳ ಸಂಚಾರ ಇಲ್ಲ. ಇನ್ನು ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ತುಮಕೂರು, ಚಿಕ್ಕಮಗಳೂರು, ಮಂಗಳೂರು, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳ ಸಾರಿಗೆ ಡಿಪೋಗಳ ನೌಕರರು ಬೀದಿಗಿಳಿದಿರುವುದರಿಂದ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ.

ಇದರ ಲಾಭವನ್ನು ಪಡೆದುಕೊಳ್ಳುವಲ್ಲಿ ಕೆಲ ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಸುಲಿಗೆಗೆ ಇಳಿದಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್