NEWSನಮ್ಮರಾಜ್ಯವಿಜ್ಞಾನ

ಸಾರಿಗೆ ನೌಕರರಿಗೆ ಅರ್ಧ ಸಂಬಳ ಬೇಡ, ಪೂರ್ತಿ ವೇತನ ನೀಡಿ: ಎಎಪಿ ನಾಗಣ್ಣ ಆಗ್ರಹ

ಲಕ್ಷ್ಮಣ್ ಸವದಿಯವರೇ ನಿಮ್ಮ ಕಾರಿಗೆ ಸಾರಿಗೆ ಇಲಾಖೆ ಪೆಟ್ರೋಲ್ ಬೇಕು, ನೌಕರರು ಬೇಡವೇ?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯಾವಾಗಿದ್ದು, ಜನ ಸಾಮಾನ್ಯರು ನಲುಗುವಂತೆ ಮಾಡಿದೆ. ಜನಸಾಮಾನ್ಯರ ಯಾವುದೇ ಸಮಸ್ಯೆಗಳನ್ನು ಸರಿಯಾಗಿ ನಿಭಾಯಿಸದೆ ವೈಫಲ್ಯಗೊಂಡಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಜೊತೆ ಉದ್ದಟತನದಿಂದ ವರ್ತಿಸುತ್ತಿದ್ದು, ಕಿಂಚಿತ್ತಾದರೂ ಸೌಜನ್ಯ ಕಲಿಯಲಿ, ಕಳೆದ ವರ್ಷ ನಡೆದ ಪ್ರತಿಭಟನೆ ವೇಳೆ ನೀಡಿದ ಭರವಸೆಯನ್ನು ಸರ್ಕಾರ ಈಡೇರಿಸದೆ ದ್ರೋಹ ಎಸಗಿದೆ ಎಂದರು.

ಲಾಕ್‌ಡೌನ್‌ನಿಂದ ನಷ್ಟ ಉಂಟಾಗಿದ್ದು ಸರಿಯಾಗಿ ಸಂಬಳ ನೀಡಲು ಕಷ್ಟ ಎಂದು ಹೇಳಿದ್ದ ಸಾರಿಗೆ ಸಚಿವ ಲಕ್ಷ್ಮಣ್ ಸವಧಿ ಎಲ್ಲಿದ್ದೀರಿ?, ಈಗ ಪೂರ್ಣ ಪ್ರಮಾಣದಲ್ಲಿ ಬಸ್‌ಗಳ ಸಂಚಾರವಿದೆ, ಸಾಕಷ್ಟು ಹಣ ಸಂಗ್ರಹವಾಗಿದೆ, ನೌಕರರು ನೀವು ಕೊಟ್ಟಷ್ಟು ಸಂಬಳ ಪಡೆದುಕೊಳ್ಳಲು ಜೀತದಾಳುಗಳಲ್ಲ ಸಾರ್ವಜನಿಕರ ಸೇವಕರು, ಈ ಕೂಡಲೇ ಪೂರ್ತಿ ಸಂಬಳ ನೀಡ ಎಂದು ಆಗ್ರಹಿಸಿದರು.

ಸಚಿವ ಲಕ್ಷ್ಮಣ್ ಸವಧಿಯವರೇ ನಿಮ್ಮ ಸ್ವಂತ ಕಾರಿಗೆ ಕೆಎಸ್‌ಆರ್‌ಟಿಸಿ ಡಿಪೋಗೆ ಹೋಗಿ ಪೆಟ್ರೋಲ್ ತುಂಬಿಸಿಕೊಳ್ಳುವಷ್ಟು ದಿವಾಳಿಯಾಗಿದ್ದೀರಿ, ನಿಮ್ಮದೆ ಇಲಾಖೆಯ ದುಡ್ಡು ಬೇಕು ಆದರೆ ನೌಕರರು ಬೇಡವೆ. ಪ್ರತಿಭಟನೆ ವೇಳೆ ಕಂಡ ನೀವು ಎಲ್ಲಿ ಕಣ್ಮರೆಯಾಗಿರುವಿರಿ ದಯವಿಟ್ಟು ನೌಕರರ ಸಮಸ್ಯೆ ಬಗೆಹರಿಸಿ ಎಂದರು.

ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಮಾತನಾಡಿ, ಲಕ್ಷಾಂತರ ನೌಕರರ ಭವಿಷ್ಯ ಇಂದಿಗೂ ಭದ್ರವಾಗಿಲ್ಲ ಮುಖ್ಯಮಂತ್ರಿಗಳು ನೇರವಾಗಿ ಈ ಸಮಸ್ಯೆ ಪರಿಹಾರಕ್ಕೆ ಮುಂದೆ ಬರಬೇಕು ಎಂದು ಆಗ್ರಹಿಸಿದರು.

ಯುವ ಘಟಕದ ಬೆಂಗಳೂರು ನಗರ ಉಪಾಧ್ಯಕ್ಷೆ ನಿತನ್ಯಾ ಪವಾರ್ ಮಾತನಾಡಿ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ದುಡಿಯುತ್ತಿರುವ ಅನೇಕ ಮಹಿಳೆಯರ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಿದೆ.‌ ಮಹಿಳೆಯರನ್ನೇ ನೆಚ್ಚಿಕೊಂಡಿರುವ ಅನೇಕ ಕುಟುಂಬಗಳು ಸರಿಯಾದ ಸಂಬಳವಿಲ್ಲದೆ ದಿಕ್ಕುತೋಚದಂತಾಗಿವೆ, ಮಕ್ಕಳ ಶಾಲಾ ಶುಲ್ಕ ಕಟ್ಟಲು ಪರದಾಡುವಂತಾಗಿದೆ, ಆದರೂ ಸರ್ಕಾರಕ್ಕೆ ಹೃದಯವಿಲ್ಲವೇ ಎಂದು ಪ್ರಶ್ನಿಸಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು