ತುಮಕೂರು: ಇನ್ನು ಸರ್ಕಾರಿ ಶಾಲೆಗಳಿಗೇ ಶ್ರೀಮಂತರೂ ಕೂಡ ತಮ್ಮ ಮಕ್ಕಳನ್ನು ಸೇರಿಸುವರು. ಆ ರೀತಿಯ ವಾತಾವರಣವನ್ನು ಮುಂದಿನದಿನಗಳಲ್ಲಿ ನಿರ್ಮಾಣ ಮಾಡುವ ಗುರಿ ನಮ್ಮ ಸರ್ಕಾರದ ಮೇಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತಂತೆ ಡಿಡಿಪಿಐ ಮತ್ತು ಬಿಇಒಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮುಂದಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಏಕೆಂದರೆ ಇಂದು ಕೂಲಿಗನು ಸಹ ತನ್ನ ಮಗುವನ್ನು ಕಷ್ಟವಾದರೂ ಖಾಸಗಿ ಶಾಲೆಗೆ ಸೇರಿಸುತ್ತಿದ್ದಾನೆ ಕಾರಣ ನಮ್ಮ ಮಗು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲಿ ಎಂದು. ಅಂದರೆ ಸರ್ಕಾರಿ ಶಾಲೆಗಳಲ್ಲಿ ಅಂಥ ಶಿಕ್ಷಣ ಮತ್ತು ವಾತಾವರಣ ಇಲ್ಲ ಎಂಬುವುದು ಆತನಿಗೂ ಗೊತ್ತಿದೆ. ಹೀಗಾಗಿ ನಾವು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮುಂದಾಗಬೇಕಿದೆ ಎಂದು ತಿಳಿಸಿದರು.
ಇಂದು ಅಮೆರಿಕಾದಲ್ಲಿ ಒಂದರಿಂದ 10ನೇ ತರಗತಿಯವರೆಗೆ ಎಂಥ ಶ್ರೀಮಂತ ಎಂದರೂ ಅವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಅದೂ ಉಚಿತವಾಗಿ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ಆದರೆ ನಮ್ಮ ದೇಶ ಮತ್ತು ರಾಜ್ಯದಲ್ಲಿ ಅಂಥ ವಾತಾವರಣ ಇಲ್ಲವಾಗಿದೆ. ಆದ್ದರಿಂದ ಮೊದಲು ನಮ್ಮ ರಾಜ್ಯದಿಂದಲೇ ಅಂತಹ ಒಂದು ಹೊಸ ಪ್ರಯತ್ನವಾಗಲಿ ಎಂಬುವುದೇ ನಮ್ಮ ಸದಾಶಯವಾಗಿದೆ ಎಂದು ಹೇಳಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ತಡಮಾಡದೇ ಬರುವ ವರ್ಷಗಳಲ್ಲಿ ಬದಲಾವಣೆ ತಂದು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಆ ಮೂಲಕ ಮಗುವನ್ನು ಖಾಸಗಿ ಶಾಲೆಗೆ ಸೇರಿಸಿ ಇದಕ್ಕಾಗಿ ಒಬ್ಬ ಕೂಲಿ ಮಾಡುವವ ತನ್ನ ದುಡಿಮೆಯ ಶೇ.40ರಷ್ಟು ಹಣವನ್ನು ಮಗುವಿನ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗೆ ನೀಡುತ್ತಿದ್ದು, ಅದರ ಬದಲಾವಣೆಗೆ ಮುನ್ನುಡಿ ಬರೆಯುತ್ತೇವೆ ಎಂದು ಹೇಳಿದರು.
ಕೂಲಿಗನು ಸರ್ಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ ಎಂದು ತನ್ನ ದುಡಿಮೆಯ ಶೇ.40ರಷ್ಟು ಪಾಲನ್ನು ಶಾಲೆಗೆ ವ್ಯಯಿಸುತ್ತಿರುವುದರಿಂದ ಆತ ಆರ್ಥಿಕವಾಗಿ ಮತ್ತಷ್ಟು ಕುಗ್ಗಿಹೋಗುತ್ತಿದ್ದಾನೆ. ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಮತ್ತು ಅಂತಹ ಕುಟುಂಬಗಳ ಆದಾಯ ಉಳಿಸುವ ಮಾರ್ಗದಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ. ಹೀಗಾದರೆ ಆ ಕೂಲಿಗನ ಕುಟುಂಬ ಆರೋಗ್ಯವಾಗಿ ಬದುಕನ್ನು ನಡೆಸಬಹುದು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail